ಬ್ರೇಕಿಂಗ್ ನ್ಯೂಸ್
18-08-22 05:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಕಾನೂನು ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ದಿನಕರ ಶೆಟ್ಟಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
2021ರ ಸೆಪ್ಟಂಬರ್ 25ರಂದು ಕರಂಗಲ್ಪಾಡಿಯ ಕಚೇರಿಯಲ್ಲಿದ್ದಾಗ ವಕೀಲ ಕೆಎಸ್ಎನ್ ರಾಜೇಶ್ ತನ್ನ ಮೇಲೆ ಅತ್ಯಾಚಾರ ನಡೆಸುವ ಉದ್ದೇಶದಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು ವಿದ್ಯಾರ್ಥಿನಿ ಅಕ್ಟೋಬರ್ 18ರಂದು ಉರ್ವಾ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಮಹಿಳಾ ಠಾಣೆಗೆ ವರ್ಗಾಯಿಸಿ ಐಪಿಸಿ ಸೆಕ್ಷನ್ 376, 376(2) ಎಫ್, 376(2)ಕೆ, 376(ಸಿ)ಎ, 511, 354(ಎ), 354(ಬಿ), 354(ಸಿ), 354(ಡಿ), 506, 384, 388, 389, 204, 203, 212, 120 ಬಿ, 179, 202 ಜೊತೆಗೆ 149 ಅಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರದಲ್ಲಿ ಮಂಗಳೂರಿನ ಕೆಲವು ವಕೀಲರೇ ಮುತುವರ್ಜಿ ವಹಿಸಿದ್ದರಿಂದ ಕೇಸು ಬಿಗಿಯಾಗಿತ್ತು.

ಅಲ್ಲದೆ, ಅತ್ಯಾಚಾರ ಯತ್ನ ಪ್ರಕರಣ ಮಾಧ್ಯಮದಲ್ಲಿಯೂ ಭಾರೀ ಸುದ್ದಿಯಾಗಿದ್ದರಿಂದ ಆರೋಪಿ ವಕೀಲ ತಲೆಮರೆಸಿಕೊಂಡಿದ್ದರು. ಎರಡು ತಿಂಗಳ ಬಳಿಕ ಮಂಗಳೂರಿನ 3ನೇ ಜೆಎಂಎಫ್ ಕೋರ್ಟಿಗೆ ವಕೀಲ ಶರಣಾಗತಿಯಾಗಿದ್ದು, ಆನಂತರ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದರು. ಆ ಸಂದರ್ಭದಲ್ಲಿ ತನಿಖೆಯ ಹೊಣೆಯನ್ನು ನಗರ ದಕ್ಷಿಣ ಉಪವಿಭಾಗದ ಎಸಿಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರಿಗೆ ವಹಿಸಲಾಗಿತ್ತು.
ಪ್ರಕರಣ ಕೈಗೆತ್ತಿಕೊಂಡ ಒಂದೇ ತಿಂಗಳಲ್ಲಿ ರಂಜಿತ್ ಕುಮಾರ್ ವರ್ಗಾವಣೆಯಾಗಿದ್ದು ತೆರವಾದ ಜಾಗಕ್ಕೆ ದಿನಕರ ಶೆಟ್ಟಿ ಬಂದಿದ್ದರು. ದಿನಕರ ಶೆಟ್ಟಿ ತನಿಖೆಯನ್ನು ಪೂರ್ತಿಗೊಳಿಸಿ ಇದೀಗ 3ನೇ ಜೆಎಂಎಫ್ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 1ನೇ ಆರೋಪಿ ಕೆಎಸ್ಎನ್ ರಾಜೇಶ್ ಮತ್ತು ಆರೋಪಿ ಪರಾರಿಯಾಗಲು ಸಹಕರಿಸಿ 2ನೇ ಆರೋಪಿ ಅನಂತ ಭಟ್ ಮತ್ತು 3ನೇ ಆರೋಪಿ ಅಚ್ಚುತ್ತ ಭಟ್ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
Mangalore Charge sheet filed against Lawyer KSN Rajesh over sexual harassment case. Two law student interns have filed complaints in the women's police station here, against special public prosecutor, K S N Rajesh of the Lokayukta division here, accusing him of sexual harassment and threat. A case has been registered against the advocate concerned.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm