ಬ್ರೇಕಿಂಗ್ ನ್ಯೂಸ್
20-08-22 01:20 pm HK News Desk ಕ್ರೈಂ
Photo credits : Etv Bharath
ಗುಜರಾತ್, ಆಗಸ್ಟ್ 20: ಶಾಲೆಯಲ್ಲಿ ನೀಡಿರುವ ಹೋಮ್ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕಾಗಿ ಮಗನ ಮೇಲೆ ನಿವೃತ್ತ ಸೇನಾಧಿಕಾರಿ ಗುಂಡು ಹಾರಿಸಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಓದುವ ಬದಲಾಗಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡ್ತಿದ್ದರಿಂದ ರೋಸಿ ಹೋಗಿರುವ ತಂದೆ ಈ ರೀತಿಯಾಗಿ ನಡೆದುಕೊಂಡಿದ್ದಾನೆಂದು ಹೇಳಲಾಗ್ತಿದೆ. ನಿವೃತ್ತ ಸೇನಾಧಿಕಾರಿ ಧರ್ಮೇಂದ್ರ ಓಂಪ್ರಕಾಶ್ ಕಾಮ್ರೇಜ್ವಾವ್ನಲ್ಲಿ ವಾಸವಾಗಿದ್ದಾರೆ. ಇವರ ಮಗ 9ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದಾನೆ. ಅಧ್ಯಯನ ಮಾಡುವ ಬದಲು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿದ್ದನು. ಇದರಿಂದ ಮಗನ ಮೇಲೆ ಗದರಿದ್ದಾನೆ. ತಂದೆ ಗದರಿಸಿದ್ದಕ್ಕಾಗಿ ಕೋಪಗೊಂಡಿರುವ ಮಗ ವೈಪರ್ನಿಂದ ಹೊಡೆದಿದ್ದಾನೆ. ಇದರಿಂದ ಆಕ್ರೋಶಗೊಂಡಿರುವ ತಂದೆ ಲೈಸನ್ಸ್ ಆಧಾರಿಕ ರಿವಾಲ್ವರ್ನಿಂದ ಮಗನ ಮೇಲೆ ಗುಂಡು ಹಾರಿಸಿದ್ದಾನೆ. ಹೀಗಾಗಿ, ಆತನ ಬಲಗೈ ಗಾಯಗೊಂಡಿದೆ. ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲತಃ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯವರಾದ ನಿವೃತ್ತ ಸೇನಾಧಿಕಾರಿ ಧರ್ಮೇಂದ್ರ ಓಂಪ್ರಕಾಶ್ ಸದ್ಯ ತಮ್ಮ ಪತ್ನಿ ಸಂಗೀತಾಬೆನ್, ಮಗ ಹಾಗೂ ಮಗಳೊಂದಿಗೆ ಗುಜರಾತ್ನಲ್ಲಿ ವಾಸವಾಗಿದ್ದಾರೆ. ನಿವೃತ್ತ ಸೇನಾಧಿಕಾರಿ ಸದ್ಯ ಸೂರತ್ನಲ್ಲಿ ಪಿಯೂಷ್ಭಾಯ್ ಎಂಬುವವರ ಅಂಗರಕ್ಷಕನಾಗಿ ಕೆಲಸ ಮಾಡ್ತಿದ್ದಾನೆ. ಕಳೆದ ಸೋಮವಾರ ಕೆಲಸ ಮುಗಿಸಿ ರಾತ್ರಿ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಮಗ ಮೊಬೈಲ್ ನೋಡುತ್ತ ಕುಳಿತಿದ್ದನು. ಈ ವಿಚಾರದಲ್ಲಿ ಗದರಿಸಿದ್ದು, ಮೊಬೈಲ್ ಫೋನ್ ಹೆಚ್ಚು ಬಳಸುವ ಬದಲು, ಓದಿನ ಕಡೆ ಗಮನ ಹರಿಸುವಂತೆ ಹೇಳಿದ್ದಾರೆ.
ಪ್ರತಿದಿನ ಅಧ್ಯಯನದ ವಿಚಾರವಾಗಿ ಬೈಯುತ್ತಿದ್ದರಿಂದ ಕೋಪಗೊಂಡ ಮಗ ರಾಜ್ಕುಮಾರ್ ತಂದೆಯ ಮೇಲೆ ವೈಪರ್ನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ತಂದೆ ಆತನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ಶಬ್ದ ಕೇಳಿರುವ ಪಕ್ಕದ ಮನೆಯ ನಿವಾಸಿಗಳು ಅಲ್ಲಿಗೆ ಓಡಿ ಬಂದಿದ್ದಾರೆ. ಜೊತೆಗೆ ಮಧ್ಯಪ್ರವೇಶ ಮಾಡಿರುವ ವ್ಯಕ್ತಿಯೋರ್ವ ಧರ್ಮೇಂದ್ರ ಅವರ ಕೈಯಲ್ಲಿದ್ದ ರಿವಾಲ್ವರ್ ಕಸಿದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಆಯಂಬುಲೆನ್ಸ್ನಲ್ಲಿ ಮಗನನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾಮ್ರೇಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಧರ್ಮೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 307 25 (1) ಮತ್ತು 271 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
Ex military man shoots son on his hand for not doing his homework in Gujrath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am