ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm