ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm