ಬ್ರೇಕಿಂಗ್ ನ್ಯೂಸ್
23-08-22 09:56 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 23: ಕೆಎಂಎಫ್ ಡೈರಿಯಲ್ಲಿ ಕೆಲಸ ಕೊಡಿಸುವುದಾಗಿ ನೂರಕ್ಕೂ ಹೆಚ್ಚು ಮಂದಿಯಿಂದ ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಸೂತ್ರಧಾರ ರಾಮಪ್ರಸಾದ್ ರಾವ್ ಅಲಿಯಾಸ್ ಹರೀಶ್ ಗೆ ಸಹಕಾರ ನೀಡಿದ ಆರೋಪದಲ್ಲಿ ಪುತ್ತೂರಿನ ಬಲ್ನಾಡು ನಿವಾಸಿ ರಮೇಶ್ ಪೂಜಾರಿ(41), ಮಂಗಳೂರು ಪಡೀಲ್ ನಿವಾಸಿ ಚಂದ್ರಾವತಿ(36), ಬೆಂಗಳೂರಿನ ದೊಡ್ಡತೋಗೂರು ಇಲೆಕ್ಟ್ರಾನಿಕ್ ಸಿಟಿ ನಿವಾಸಿ ಸುರೇಂದ್ರ ರೆಡ್ಡಿ(35)ಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಂಗಳೂರಿನ ಸಿಇಎನ್ ಠಾಣೆಯಲ್ಲಿ ದಾಖಲಾದ ದೂರಿನಂತೆ, 138ಕ್ಕೂ ಹೆಚ್ಚು ಮಂದಿಯಿಂದ ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಚಂದ್ರಾವತಿ ಎನ್ನುವ ಮಹಿಳೆ ತಾನು ಕೆಎಂಎಫ್ ನಲ್ಲಿ ಉದ್ಯೋಗಿಯೆಂದು ಹೇಳಿಕೊಂಡು ಹಲವರಿಂದ ಹಣ ಪಡೆದು ವಂಚಿಸಿದ್ದ ಬಗ್ಗೆ ಸಂತ್ರಸ್ತರು ದೂರಿನಲ್ಲಿ ಹೇಳಿದ್ದರು. 70 ಸಾವಿರದಿಂದ ಹಿಡಿದು 3.5 ಲಕ್ಷ ರೂ. ವರೆಗೆ ನೂರಕ್ಕೂ ಹೆಚ್ಚು ಮಂದಿ ಹಣ ನೀಡಿದ್ದು ಒಟ್ಟು 1.84 ಕೋಟಿ ರೂಪಾಯಿ ಹಣ ಪಡೆದು ಭಾರೀ ವಂಚನೆ ಎಸಗಿರುವುದಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಮೊದಲಿಗೆ ಮಹಿಳೆಯ ಹೆಸರು ಎಫ್ಐಆರ್ ನಲ್ಲಿ ಇರಲಿಲ್ಲ. ಸಂತ್ರಸ್ತರು ನೀಡಿರುವ ದೂರಿನಲ್ಲಿ ಚಂದ್ರಾವತಿ ಎಂಬ ಮಹಿಳೆಯೇ ತಮ್ಮಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಉಲ್ಲೇಖ ಮಾಡಿದ್ದರು. ಆದರೆ ಕೆಲವು ಒತ್ತಡಗಳ ಕಾರಣವೋ ಏನೋ ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಉಲ್ಲೇಖ ಆಗಿರಲಿಲ್ಲ. ಈ ಬಗ್ಗೆ ಹೆಡ್ ಲೈನ್ ಕರ್ನಾಟಕದಲ್ಲಿ ವಂಚನೆ ಪ್ರಕರಣದಲ್ಲಿ ಮಹಿಳೆಯೇ ಕಿಂಗ್ ಪಿನ್ ಎನ್ನುವ ಬಗ್ಗೆ ಸುದ್ದಿ ಪ್ರಸಾರ ಮಾಡಲಾಗಿತ್ತು. ಅಲ್ಲದೆ, ಪೊಲೀಸ್ ಕಮಿಷನರ್ ಅವರ ಗಮನವನ್ನೂ ಸೆಳೆಯಲಾಗಿತ್ತು. ಇದೀಗ ಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ತರು ನೀಡಿರುವ ಹಣವನ್ನು ಮರಳಿಸುವ ಜವಾಬ್ದಾರಿಯನ್ನು ಪೊಲೀಸರು ಹೊತ್ತುಕೊಳ್ಳುತ್ತಾರೋ ನೋಡಬೇಕು.
Mangalore KMF Dairy job fraud crores cheated another three including woman arrested. The arrested have been identified as Ramesh, Chandravathi and Surendra Reddy. A conman named Ram Prasad was posing as Harish to the victims hailing from Malar and his partner Mallesh pretended as Dr Hemanth conning several people by assuring them jobs at MRPL. Mallesh allegedly duped the victims of Rs 30 lacs. In this regard, a complaint has been filed at the Bajpe police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm