ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am