ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am