ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm