ಬ್ರೇಕಿಂಗ್ ನ್ಯೂಸ್
06-10-20 11:34 am Headline Karnataka News Network ಕ್ರೈಂ
ಕಾಸರಗೋಡು, ಅಕ್ಟೋಬರ್ 6: ಜಿಲ್ಲಾಧಿಕಾರಿ ನಿವಾಸದ ಬಳಿಯಿಂದಲೇ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮೆಂಟ್ ಸಾಗಾಟದ ಲಾರಿಯಲ್ಲಿ ವಿಶೇಷ ಕ್ಯಾಬಿನ್ ನಿರ್ಮಿಸಿ ಅದರೊಳಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸಿ ಸಾಗಿಸಲಾಗುತ್ತಿತ್ತು. ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm