ಬ್ರೇಕಿಂಗ್ ನ್ಯೂಸ್
25-08-22 02:18 pm HK News Desk ಕ್ರೈಂ
ಭೋಪಾಲ್, ಆಗಸ್ಟ್ 25: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಸಂಬಂಧದಲ್ಲಿ ಸೋದರರೇ ಆಗಿರುವ ಯುವಕರು ಸೇರಿ ಗ್ಯಾಂಗ್ ರೇಪ್ ನಡೆಸಿದ್ದಲ್ಲದೆ, ಹೊಡೆದು ಸಾಯಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಜಬಲ್ ಪುರ್ ಜಿಲ್ಲೆಯ ಮಾಂಜಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿಯ ನೆರವಿಗೆ ಬಂದ ಅಜ್ಜಿಯನ್ನೂ ರೇಪ್ ಮಾಡಿದ್ದಾರೆ.
ಬಾಲಕಿ ತನ್ನ ಹೆತ್ತವರ ಜೊತೆ ಮುಂಬೈನಲ್ಲಿ ವಾಸವಿದ್ದು ಆಗಸ್ಟ್ 11ರಂದು ಜಬಲ್ ಪುರದ ಅಂಕಲ್ ಮನೆಗೆ ಬಂದಿದ್ದಳು. ಈ ವೇಳೆ, ಆಕೆಗೆ ಸೋದರ ಸಂಬಂಧಿಗಳಾಗಿರುವ ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಸರಣಿ ಅತ್ಯಾಚಾರ ನಡೆಸಿದ್ದಲ್ಲದೆ, ಹಲ್ಲೆಯನ್ನೂ ನಡೆಸಿದ್ದಾರೆ. ಆಗಸ್ಟ್ 13ರಂದು ಮೊದಲಿಗೆ ರೇಪ್ ಮಾಡಿದ್ದು ಆನಂತರ ವಾರ ಕಾಲ ಹಲ್ಲೆಗೈದು ಸರಣಿ ಗ್ಯಾಂಗ್ ರೇಪ್ ನಡೆಸಿದ್ದಾರೆ. 19ರಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮರುದಿನ ಸಾವನ್ನಪ್ಪಿದ್ದಳು. ಆನಂತರ ಜಬಲ್ ಪುರದಲ್ಲಿಯೇ ಬಾಲಕಿಯನ್ನು ದಫನ ಮಾಡಲಾಗಿತ್ತು.
ಈ ಮಧ್ಯೆ ಮುಂಬೈನಿಂದ ಬಂದ ಬಾಲಕಿಯ ತಂದೆಗೆ ಹಲ್ಲೆಗೊಳಗಾಗಿದ್ದ ಅಜ್ಜಿಯೇ ಮಾಹಿತಿ ನೀಡಿದ್ದು ಯುವಕರು ತನ್ನ ಮೇಲೂ ರೇಪ್ ಮಾಡಿದ್ದಾಗಿ ಹೇಳಿದ್ದಾರೆ. ಬಾಲಕಿಯ ಮೇಲೆ ರೇಪ್ ಮಾಡಿ, ಹಲ್ಲೆ ನಡೆಸಿರುವ ಬಗ್ಗೆಯೂ ತಿಳಿಸಿದ್ದು, ಅದರಂತೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ಆಗಸ್ಟ್ 23ರಂದು ಬಾಲಕಿಯ ಶವವನ್ನು ದಫನ ಮಾಡಿದ ಜಾಗದಿಂದ ಅಗೆದು ತೆಗೆದಿದ್ದು, ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ, ಅಜ್ಜಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ರೇಪ್ ಆಗಿರುವುದು ದೃಢಪಟ್ಟಿದೆ. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿರುವ ಪೊಲೀಸರು ಒಬ್ಬನ್ನು ಬಂಧಿಸಿದ್ದಾರೆ.
A 16-year-old girl died after being gang-raped and brutally beaten by her two cousins in the Ranjhi area of Madhya Pradesh’s Jabalpur district. The victim’s grandmother, who came to the girl’s aid, was also raped by one of the accused, police said.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm