ಬ್ರೇಕಿಂಗ್ ನ್ಯೂಸ್
28-08-22 05:57 pm Mangalore Correspondent ಕ್ರೈಂ
ಮಂಗಳೂರು, ಆ.28 : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕರಿಯನಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಂಜಿತ್ ಕುಮಾರ್ ಎಂಬಾತ ಜೈಲು ಶಿಕ್ಷೆಗೊಳಗಾದ ಆರೋಪಿ. ಈತ ಕಿರುಕುಳಕ್ಕೊಳಗಾದ ಬಾಲಕಿಯ ತಾಯಿ ಪಾಲಿಗೆ ಎರಡನೇ ಪತಿಯಾಗಿದ್ದು, 2019 ಮೇ 8ರಂದು ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಆರೋಪಿಯ ಕೃತ್ಯವನ್ನು ಪ್ರತ್ಯಕ್ಷ ಕಂಡ ಬಾಲಕಿಯ ತಾಯಿ ಪ್ರಶ್ನಿಸಿದಾಗ ರಂಜಿತ್ ಕುಮಾರ್ ಅವಾಚ್ಯ ಶಬ್ದಗಳಿಂದ ಬೈದು ಬೆದರಿಸಿದ್ದ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಬಾಲಕಿ ತಾಯಿ ನೀಡಿದ್ದ ದೂರಿನಂತೆ ರಂಜಿತ್ ಕುಮಾರ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು.
ಮೂಡುಬಿದಿರೆ ಪೊಲೀಸ್ ಠಾಣೆಯ ಎಸ್ಸೈ ಸಾವಿತ್ರಿ ನಾಯಕ್ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪೊಕ್ಸೋ ಕಾಯ್ದೆಗೆ ಸಂಬಂಧಿಸಿ 5 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ, ಅತ್ಯಾಚಾರ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1000 ರೂ. ದಂಡ, ಭಾ.ದಂ.ಸಂ. ಕಲಂ-504ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ದಂಡ, ಭಾ.ದಂ. ಸಂ. ಕಲಂ 506ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Mangalore Sexual harassment on daughter by father, court announces 5 years jail with eight thousand rupees fine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am