ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm