ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm