ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm