ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm