ಬ್ರೇಕಿಂಗ್ ನ್ಯೂಸ್
03-09-22 02:03 pm HK News Desk ಕ್ರೈಂ
ಭೋಪಾಲ್, ಸೆ.3: ತಾನು ದೊಡ್ಡ ರೌಡಿಯೆಂದು ಪ್ರಸಿದ್ಧಿಗೆ ಬರಬೇಕು, ಕನ್ನಡದ ಸಿನಿಮಾ ಕೆಜಿಎಫ್ ಹೀರೋ ರೀತಿ ಹೈಲೈಟ್ ಆಗಬೇಕೆಂಬ ಹುಚ್ಚು ಆಸೆ ಬೆಳೆಸಿಕೊಂಡ 19 ವರ್ಷ ಯುವಕನೊಬ್ಬ ನಾಲ್ವರು ಸೆಕ್ಯುರಿಟಿ ಗಾರ್ಡ್ಗಳನ್ನು ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಆರೋಪಿ ಶಿವಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರ ಹತ್ಯೆಗೆ ಸ್ಕೆಚ್ ಹಾಕಿದ್ದಾಗಲೇ ಬಲೆಗೆ ಬಿದ್ದಿದ್ದಾನೆ. ಹಂತಕನ ಮುಂದಿನ ಟಾರ್ಗೆಟ್ ಪೊಲೀಸರೇ ಆಗಿದ್ದರು. ಕೆಜಿಎಫ್ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧಿ ಪಡೆಯುವುದಕ್ಕಾಗಿ ಸರಣಿ ಕೊಲೆ ಕೃತ್ಯ ಎಸಗಿದ್ದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆರೋಪಿ ಶಿವಪ್ರಸಾದ್, ಕೊಲೆಗೈದ ವ್ಯಕ್ತಿಯೊಬ್ಬನಲ್ಲಿದ್ದ ಮೊಬೈಲನ್ನು ಕದ್ದು ತಾನೇ ಬಳಸಿಕೊಂಡಿದ್ದು ಮುಳುವಾಗಿ ಪರಿಣಮಿಸಿತ್ತು. ಕೊಲೆ ಕೇಸಿನಲ್ಲಿ ತನಿಖೆ ಶುರು ಹಚ್ಚಿದ್ದ ಪೊಲೀಸರು ಫೋನ್ ಟ್ರ್ಯಾಕ್ ಮಾಡಿದಾಗ, ಆರೋಪಿಯ ಜಾಡು ಸಿಕ್ಕಿದ್ದು ಬಂಧಿಸಿದ್ದಾರೆ.
ಸೆಕ್ಯುರಿಟಿ ಗಾರ್ಡ್ಗಳು ಮಲಗಿರುತ್ತಿದ್ದಾಗ ಶಿವಪ್ರಸಾದ್ ಅವರನ್ನು ಸುಲಭದಲ್ಲಿ ಹೊಡೆದು ಕೊಲ್ಲುತ್ತಿದ್ದ. ಸಾಗರ್ ಜಿಲ್ಲೆಯಲ್ಲಿ ಮೂವರು, ಭೋಪಾಲ್ನಲ್ಲಿ ಒಬ್ಬನನ್ನು ಇದೇ ರೀತಿ ಹತ್ಯೆ ಮಾಡಿದ್ದಾನೆ. ಈ ಪೈಕಿ ಒಂದು ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಆರೋಪಿಯು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದ. ಆನಂತರ ತನ್ನನ್ನು ಯಾರೂ ನೋಡಿಲ್ಲ ಎಂಬುದನ್ನು ಖಾತ್ರಿ ಪಡಿಸಿ ಪರಾರಿಯಾಗಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಮುಂದಿನ ದಿನಗಳಲ್ಲಿ ಪೊಲೀಸರನ್ನೇ ಹತ್ಯೆ ಮಾಡಲು ಯೋಚಿಸಿದ್ದಾಗಿ ಆರೋಪಿ ಶಿವಪ್ರಸಾದ್ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ತಾನು ಪ್ರಸಿದ್ಧಿ ಹೊಂದಬೇಕು ಎಂಬ ಒಂದೇ ಕಾರಣಕ್ಕೆ ರಾತ್ರಿ ಹೊತ್ತು ನಿದ್ರೆ ಮಂಪರಿನಲ್ಲಿರುತ್ತಿದ್ದ ಸೆಕ್ಯುರಿಟಿ ಗಾರ್ಡ್ಗಳನ್ನ ಕಲ್ಲು, ಕಬ್ಬಿಣದ ರಾಡ್, ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡುತ್ತಿದ್ದ. ಯಾರೊಬ್ಬರನ್ನೂ ಲೂಟಿ ಮಾಡಿಲ್ಲ. ಅವನ ಉದ್ದೇಶ ಕೊಲೆ ಮಾಡುವುದಷ್ಟೇ ಆಗಿತ್ತು. ನಾಲ್ಕು ಕೊಲೆಯಾದ್ರೂ ಹೆಸರು ಬಂದಿಲ್ಲ ಅಂತ ಮುಂದಿನ ಟಾರ್ಗೆಟ್ ಪೊಲೀಸರನ್ನೇ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
On Friday, the Madhya Pradesh Police arrested a 19-year-old alleged serial killer for reportedly murdering four security guards in their sleep. According to NDTV, the accused, Shivprasad Dhurve, was inspired by the Kannada blockbuster film KGF and wanted to become famous.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm