ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am