ಬ್ರೇಕಿಂಗ್ ನ್ಯೂಸ್
04-09-22 05:44 pm Bangalore Correspondent ಕ್ರೈಂ
ಬೆಂಗಳೂರು,ಸೆ.4: ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಅನುಮಾನಿಸುತ್ತಿದ್ದ ಗಂಡನನ್ನು ತನ್ನ ಅಕ್ಕನ ಮಗನ ಸಹಾಯದಿಂದ ಬೆಂಗಳೂರಿನಲ್ಲಿ ಕೊಂದು ಶವವನ್ನು ಊರಿಗೆ ಕೊಂಡೊಯ್ದು ನಾಟಕವಾಡಿದ ಹೆಂಡತಿಯನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ.ಶಿಲ್ಪಾ ಬಂಧಿತ ಮಹಿಳೆ. ಮಹೇಶ್ ಕೊಲೆಯಾದವರು.
ಪತ್ನಿಯ ಶೀಲ ಶಂಕಿಸಿದ ಪತಿ ಕೊಲೆ:
ಮಂಡ್ಯ ಮೂಲದ ಮಹೇಶ್ ಮತ್ತು ಶಿಲ್ಪಾಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಬಳಿಕ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ದಂಪತಿ ವಾಸವಾಗಿದ್ದರು. ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಕಳೆದ ಗುರುವಾರವೂ ಶಿಲ್ಪಾಳನ್ನ ಭೇಟಿಯಾಗಲು ಬಂದು ಗಲಾಟೆ ಮಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.
ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ವಶಕ್ಕೆ ಪಡೆದು ವಿಚಾರಿಸಿದಾಗ ಅಸಲಿ ವಿಚಾರ ಬಯಲಾಗಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.
Bangalore Wife kills the husband with the help of a relative as he was doubting her and takes the body to Mandya stating he died of some health issue but later after the police intervened the matter came to light.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm