ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.

7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm