ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.

7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm