ಬ್ರೇಕಿಂಗ್ ನ್ಯೂಸ್
05-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ಸುಲಿಗೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಲಿಗೆ ಮಾಡಿದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಸಹಿತ ಒಟ್ಟು 5 ಲಕ್ಷ ಮೌಲ್ಯ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ(39), ಉರ್ವಾ ನಿವಾಸಿ ಸುಜಿತ್ ಶೆಟ್ಟಿ (40), ಪದವಿನಂಗಡಿ ನಿವಾಸಿ ಸುರೇಶ್ ರೈ(39) ಬಂಧಿತರು. ಕಳೆದ ಆಗಸ್ಟ್ ತಿಂಗಳಲ್ಲಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರ ಸುಲಿಗೆ ಪ್ರಕರಣ, ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು.
ಆ.14ರಂದು ಮಂಗಳೂರು ಕದ್ರಿ ಆಳ್ವಾರಿಸ್ ರಸ್ತೆಯಲ್ಲಿ ಪುಣೆ ಮೂಲದ ಮಹಿಳೆಯ ಸರ ಕಳ್ಳತನ ಆಗಿತ್ತು. ಅನಂತರ ಆ.24 ರಂದು ಕುಲಶೇಖರ ಎವರೆಸ್ಟ್ ಪ್ಲಾಸ್ಟಿಕ್ ಫ್ಯಾಕ್ಟರಿಯ ರಸ್ತೆಯಲ್ಲಿ ಮಹಿಳೆಯ ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಆ.25 ರಂದು ಮಂಗಳೂರು ನಗರ ಕಂಕನಾಡಿ ಪೊಲೀಸ್ ಠಾಣೆಯ ಶಕ್ತಿನಗರದ ರಾಜೀವ ನಗರದಲ್ಲಿ ಮಹಿಳೆ ಸರವನ್ನು ಸುಲಿಗೆ ಮಾಡಲಾಗಿತ್ತು.
ಕೃತ್ಯದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದರು. ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಿದ್ದರು. ಜುವೆಲ್ಲರಿಗೆ ಬಂದಿದ್ದ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಚಾಲಕನಾಗಿದ್ದು, ಸುಜಿತ್ ಶೆಟ್ಟಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ. ಸುರೇಶ್ ರೈ ಟೆಂಪೋ ಚಾಲಕನಾಗಿರುತ್ತಾನೆ. ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.
Mangalore Three robbers held for snatching gold and selling it to gold smith.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am