ಬ್ರೇಕಿಂಗ್ ನ್ಯೂಸ್
07-10-20 04:52 pm Mangalore Correspondent ಕ್ರೈಂ
ಬಂಟ್ವಾಳ, ಅಕ್ಟೋಬರ್ 07: ಮನೆಯ ಬೀಗ ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಮಂಗಳವಾರ ರಾತ್ರಿ ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿ ನಡೆದಿದೆ.
ಸುಲೈಮಾನ್ ಎಂಬವರ ಮನೆಯಿಂದ ಕಳ್ಳತನ ನಡೆದಿದ್ದು, ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸುಲೈಮಾನ್ ಅವರ ಪುತ್ರಿ ಮಿಶ್ರಿಯಾ ಗಂಡನ ಮನೆಯಿಂದ ಅಮ್ಟೂರಿನ ತಂದೆಯ ಮನೆಗೆ ಬಂದಿದ್ದರು. ಅವರು ತನ್ನ ಜೊತೆಗೆ ತಂದಿದ್ದ ಸುಮಾರು 28 ಪವನ್ ಚಿನ್ನಾಭರಣವನ್ನು ಮನೆಯ ಕಪಾಟಿನಲ್ಲಿ ಇಟ್ಟಿದ್ದರೆನ್ನಲಾಗಿದೆ.

ನಿನ್ನೆ ಮಧ್ಯರಾತ್ರಿ ಮನೆಮಂದಿ ಮಲಗಿದ್ದ ವೇಳೆ ಹಿಂಬಾಗಿಲ ಚಿಲಕ ಮುರಿದು ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಚಿಲಕ ಒಡೆದು ಚಿನ್ನಾಭರಣ ಕಳವುಗೈದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಸುಲೈಮಾನ್ ಎಚ್ಚರಗೊಂಡಿದ್ದು ಮನೆಯ ಹಿಂಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದ್ದು ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ. ಅವಿನಾಶ್ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am