ಬ್ರೇಕಿಂಗ್ ನ್ಯೂಸ್
07-10-20 04:52 pm Mangalore Correspondent ಕ್ರೈಂ
ಬಂಟ್ವಾಳ, ಅಕ್ಟೋಬರ್ 07: ಮನೆಯ ಬೀಗ ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಮಂಗಳವಾರ ರಾತ್ರಿ ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿ ನಡೆದಿದೆ.
ಸುಲೈಮಾನ್ ಎಂಬವರ ಮನೆಯಿಂದ ಕಳ್ಳತನ ನಡೆದಿದ್ದು, ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸುಲೈಮಾನ್ ಅವರ ಪುತ್ರಿ ಮಿಶ್ರಿಯಾ ಗಂಡನ ಮನೆಯಿಂದ ಅಮ್ಟೂರಿನ ತಂದೆಯ ಮನೆಗೆ ಬಂದಿದ್ದರು. ಅವರು ತನ್ನ ಜೊತೆಗೆ ತಂದಿದ್ದ ಸುಮಾರು 28 ಪವನ್ ಚಿನ್ನಾಭರಣವನ್ನು ಮನೆಯ ಕಪಾಟಿನಲ್ಲಿ ಇಟ್ಟಿದ್ದರೆನ್ನಲಾಗಿದೆ.
ನಿನ್ನೆ ಮಧ್ಯರಾತ್ರಿ ಮನೆಮಂದಿ ಮಲಗಿದ್ದ ವೇಳೆ ಹಿಂಬಾಗಿಲ ಚಿಲಕ ಮುರಿದು ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಚಿಲಕ ಒಡೆದು ಚಿನ್ನಾಭರಣ ಕಳವುಗೈದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಸುಲೈಮಾನ್ ಎಚ್ಚರಗೊಂಡಿದ್ದು ಮನೆಯ ಹಿಂಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದ್ದು ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ. ಅವಿನಾಶ್ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm