ಬ್ರೇಕಿಂಗ್ ನ್ಯೂಸ್
08-09-22 07:51 pm Mangalore Correspondent ಕ್ರೈಂ
ಉಳ್ಳಾಲ, ಆ.8: ಸೋಮೇಶ್ವರ ಬೀಚ್ ಬಳಿಯ ಹೋಂ ಸ್ಟೇ ಒಂದಕ್ಕೆ ನಿನ್ನೆ ಸಂಜೆ ಕನ್ನ ಹಾಕಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಎರಡು ಮನೆಗಳಿಂದ ನಗ, ನಗದು ದೋಚಿದ್ದ ಕಳ್ಳನನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಮೊವಾಝ್ (35) ಬಂಧಿತ ಖದೀಮ. ಆರೋಪಿ ಮೊವಾಝ್ ಕೇರಳದ ಕಣ್ಣೂರಿನ ಪತ್ನಿ ಮನೆಯಲ್ಲೇ ನೆಲೆಸಿದ್ದು ಆಗಾಗ್ಗೆ ಮಂಗಳೂರಿಗೆ ಬಂದು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ. ನಿನ್ನೆ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ಬಾಡಿಗೆ ಮನೆ ನಿವಾಸಿಯಾದ ಪ್ರಶಾಂತ್ ಅವರ ಮನೆ ಹಿಂಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಮೊವಾಝ್ ಕಪಾಟಿನಲ್ಲಿದ್ದ ಕರಿಮಣಿ ಸರ ಮತ್ತು ಚೈನ್ ಸೇರಿ ಒಟ್ಟು 26 ಗ್ರಾಂ ಚಿನ್ನ ಅಲ್ಲದೆ 3000 ರೂಪಾಯಿ ನಗದನ್ನ ದೋಚಿದ್ದ. ಪ್ರಶಾಂತ್ ಅವರು ಪತ್ನಿ , ಮಗನೊಂದಿಗೆ ಉಡುಪಿಗೆ ತೆರಳಿದ್ದ ವೇಳೆ ಕಳ್ಳತನ ನಡೆದಿತ್ತು.



ಬುಧವಾರ ಸಂಜೆ 7.15 ರ ವೇಳೆ ಪ್ರಶಾಂತ್ ಅವರು ನೆಲೆಸಿರುವ ಬಾಡಿಗೆ ಮನೆ ಪಕ್ಕದಲ್ಲಿರುವ ನಮೋ ಹೆರಿಟೇಜ್ ಎಂಬ ಹೋಂ ಸ್ಟೇ ಕಟ್ಟಡಕ್ಕೆ ತಲೆಗೆ ಟೊಪ್ಪಿ ಮತ್ತು ಕಣ್ಣಿಗೆ ಕನ್ನಡಕ ಹಾಕಿ ನುಗ್ಗಿದ್ದ ಮೊವಾಝ್ ಬಾಗಿಲನ್ನ ಕಬ್ಬಿಣದ ಸಲಾಕೆಯಲ್ಲಿ ಮುರಿದು ಕನ್ನ ಹಾಕಿರೋದು ಅಲ್ಲಿನ ಸಿಸಿಟಿವಿಯಲ್ಲಿ ವೀಡಿಯೋ ದಾಖಲಾಗಿತ್ತು. ಹೋಂ ಸ್ಟೇ ಒಳಗಡೆ ತಡಕಾಡಿದ ಆತನಿಗೆ ಅಲ್ಲಿ ಏನೂ ಸಿಕ್ಕಿರಲಿಲ್ಲ.

ನಿನ್ನೆ ರಾತ್ರಿ ಉಳ್ಳಾಲ ಮೇಲಂಗಡಿಯ ಕಿರೋಡಿಯನ್ ಕುಟಂಬಸ್ಥರ ದೈವಸ್ಥಾನಕ್ಕೂ ಈತ ಕನ್ನ ಹಾಕಿದ್ದು ಹಿತ್ತಾಳೆಯ ದೈವದ ಪರಿಕರಗಳು ಮತ್ತು ಕಾಣಿಕೆ ಹುಂಡಿಯ ಚಿಲ್ಲರೆ ಹಣವನ್ನ ಎಗರಿಸಿದ್ದ. ಪಕ್ಕದಲ್ಲೇ ಇದ್ದ ದೈವದ ಚಾಕರಿಯವರಾದ ಪ್ರಸಾದ್ ಅವರ ಮನೆಯ ಹಿಂಬಾಗಿಲನ್ನ ಮುರಿದು ಕಬಾಟಿನಲ್ಲಿದ್ದ 56 ಗ್ರಾಂ ಚಿನ್ನವನ್ನ ದೋಚಿ ಪರಾರಿಯಾಗಿದ್ದ. ಈ ಬಗ್ಗೆಯೂ ದೈವಸ್ಥಾನದ ಹತ್ತಿರದ ಮನೆಯೊಂದರ ಸಿಸಿಟಿವಿಯಲ್ಲಿ ಕಳ್ಳ ಮೊವಾಝ್ ನ ಚಹರೆ ದಾಖಲಾಗಿತ್ತು.

ಕ್ಷಿಪ್ರವಾಗಿ ಕಳ್ಳನ ಜಾಡನ್ನ ಹಿಡಿದ ಉಳ್ಳಾಲ ಪಿಐ ಸಂದೀಪ್ ನೇತೃತ್ವದ ತಂಡವು ಕಳ್ಳನನ್ನ ಹೆಡೆಮುರಿ ಕಟ್ಟಲು ಯಶಸ್ವಿಯಾಗಿದೆ. ಆರೋಪಿ ಮೊವಾಝ್ ಈ ಹಿಂದೆ ಉಳ್ಳಾಲದಲ್ಲಿ ನಡೆದಂತಹ ಅನೇಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Mangalore Robbery in two houses, gold cash robbed, accused arrested in one days time by ullal police
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am