ಬ್ರೇಕಿಂಗ್ ನ್ಯೂಸ್
10-09-22 12:43 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ನಗರ ಭಾಗದಲ್ಲಿರುವ ಖಾಲಿ ಜಾಗಗಳನ್ನು ಗುರುತಿಸಿ, ಅದನ್ನು ಮಾರಾಟ ಮಾಡುವುದಾಗಿ ಹೇಳಿ ಸಿಲಿಕಾನ್ ಸಿಟಿ ಜನರನ್ನು ಯಾಮಾರಿಸಿ ಲೋನ್ ತೆಗೆಸಿಕೊಟ್ಟು ಮೋಸ ಎಸಗುತ್ತಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧಿಸಿ ಕೆ.ಜಿ ನಗರ ಪೊಲೀಸರು ಉದಯ್ ಪ್ರತಾಪ್ ಸಿಂಗ್, ಅಯೂಬ್ ಖಾನ್ ಹಾಗೂ ಮುರಲೀಧರ ಎಂಬವರನ್ನು ಬಂಧಿಸಿದ್ದಾರೆ. ಬನಶಂಕರಿಯಲ್ಲಿ ಡಾಕ್ಟರ್ ನರಸಯ್ಯ ಎಂಬವರಿಗೆ ಸೇರಿದ ಬಿಡಿಎ ಪ್ರಾಧಿಕಾರದಿಂದ ಅಲಾಟ್ ಆಗಿದ್ದ 60 X 40 ಖಾಲಿ ಜಾಗವನ್ನು ಆರೋಪಿಗಳು ಗುರುತಿಸಿ, ನಕಲಿ ದಾಖಲೆ ಸೃಷ್ಟಿಸಿದ್ದರು. ಅಸಲಿ ಹಕ್ಕುದಾರ ನರಸಯ್ಯ ಅವರ ಬದಲು ಬಸವೇಶ್ವರ ನಗರದ ಮುರಲೀಧರ್ ಎಂಬ ವ್ಯಕ್ತಿಯನ್ನು ವಾರಸುದಾರ ಎಂದು ತೋರಿಸಿ ಚಾಮರಾಜಪೇಟೆ ಸಬ್ ರಿಜಿಸ್ಟ್ರಾರ್ ಆಫೀಸ್ನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು. ಬಳಿಕ ಬಿಡಿಎಯಿಂದ ಆಗಿದ್ದ ಅಲಾಟ್ ಮೆಂಟ್ ಲೆಟರ್ ಮತ್ತು ನೋಂದಣಿ ಪತ್ರಗಳನ್ನು ತೋರಿಸಿ ಸೈಟ್ ಮಾರಾಟಕ್ಕೆ ಮುಂದಾಗಿದ್ದರು. ಫ್ಲಿಪ್ ಕಾರ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಎಂಬಾತ ಇವರ ಬಲೆಗೆ ಬಿದ್ದಿದ್ದು, ಆತನಿಗೆ ಜಾಗ ಮಾರಾಟಕ್ಕೆ ಲೋನ್ ಮಾಡಿಸಿಕೊಡುವುದಾಗಿ ಮನವೊಲಿಸಿದ್ದಾರೆ. ಬಳಿಕ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಆತನ ಸಂಬಳದ ಮೇಲೆ 1.40 ಕೋಟಿ ರೂ. ಸಾಲ ಮೊಡಿಸಿಕೊಟ್ಟಿದ್ದರು. ಅಲ್ಲದೆ, ನಕಲಿ ನರಸಯ್ಯ ಅವರನ್ನು ಇಟ್ಟುಕೊಂಡು ಸುನೀಲ್ಗೆ ಜಾಗವನ್ನು ರಿಜಿಸ್ಟರ್ ಮಾಡಿಸಿದ್ದರು.
ಇಸಿ ತೆಗೆಯಲು ಹೋದಾಗ ವಂಚನೆ ಬಯಲು
ಇದೇ ವೇಳೆ, ಜಾಗದ ಅಸಲಿ ಮಾಲೀಕ ನರಸಯ್ಯ ತನ್ನ ಜಾಗದ ಮೇಲೆ ‘ಇಸಿ’ಯನ್ನು ತೆಗೆಯಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋದಾಗ, ಬೇರೆಯವರ ಹೆಸರಲ್ಲಿ ಜಾಗ ನೋಂದಣಿ ಆಗಿರುವುದು ಕಂಡುಬಂದಿದೆ. ವಂಚನೆ ಆಗಿರುವುದು ತಿಳಿಯುತ್ತಲೇ ವಿವಿ ಪುರಂ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ಬಳಿಕ ಕೆ.ಜಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳ ಪೈಕಿ ಉದಯ್, ನಾಗ್ಪುರದಲ್ಲಿ ವಾಸವಿದ್ದು ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಾನೆ. ಈ ಹಿಂದೆಯೂ ಇದೇ ತಂಡ ನಕಲಿ ಪಾಸ್ಪೋರ್ಟ್ ಮಾಡಿಸಿಕೊಟ್ಟು ಪೊಲೀಸರ ಬಲೆಗೆ ಬಿದ್ದಿದ್ದರು. ನಕಲಿ ನರಸಯ್ಯನೆಂದು ನಟಿಸಿ, ಅಕ್ರಮಕ್ಕೆ ಸಹಕಾರ ನೀಡಿದ್ದ ಮುರಲೀಧರ ಬಸವೇಶ್ವರ ನಗರದ ನಿವಾಸಿ. ನರಸಯ್ಯನ ಹೆಸರು ಹೇಳಿಕೊಂಡು ಬಂದಿದ್ದಕ್ಕೆ ಆರೋಪಿ ಉದಯ್, ಈತನಿಗೆ 2 ಲಕ್ಷ ರೂ. ಕೊಟ್ಟಿದ್ದನಂತೆ.
Bangalore Three arrested for creating fake documents and borrowing bank loan.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm