ಬ್ರೇಕಿಂಗ್ ನ್ಯೂಸ್
10-09-22 02:48 pm HK News Desk ಕ್ರೈಂ
ಆಂಧ್ರಪ್ರದೇಶ, ಸೆ.10: ಲೋನ್ App ಸಾಲಕ್ಕೆ ದಂಪತಿ ಬಲಿಯಾಗಿದ್ದಾರೆ. ಕೊಲ್ಲಿ ದುರ್ಗಾರಾವ್ ಹಾಗೂ ರಮ್ಯಾ ಲಕ್ಷ್ಮಿ ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಲ್ಲಿ ದುರ್ಗಾರಾವ್ ಅವರು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಲಬ್ಬರ್ತಿ ಮೂಲದವರಾಗಿದ್ದು, 10 ವರ್ಷಗಳ ಹಿಂದೆ ಜೀವನೋಪಾಯ ಅರಸಿ ರಾಜಮಹೇಂದ್ರವರಂಗೆ ಬಂದಿದ್ದರು. ಆರು ವರ್ಷಗಳ ಹಿಂದೆ ರಮ್ಯಾ ಲಕ್ಷ್ಮಿಯನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಪೇಂಟರ್ ಆಗಿ ದುರ್ಗಾರಾವ್ ಕೆಲಸ ಮಾಡುತ್ತಿದ್ದು, ಟೈಲರ್ ಆಗಿ ರಮ್ಯಾ ಲಕ್ಷ್ಮಿ ಕಾರ್ಯನಿರ್ವಹಿಸುತ್ತಿದ್ದರು. ದಂಪತಿ ಎರಡು ಆನ್ಲೈನ್ ಲೋನ್ ಅಪ್ಲಿಕೇಶನ್ಗಳಿಂದ ಸಾಲ ಪಡೆದುಕೊಂಡಿದ್ದರು. ಸಾಲ ನೀಡಿದವರು ಕಿರುಕುಳ ನೀಡಲು ಆರಂಭಿಸಿದರು. ದಂಪತಿ ಸಾಲದ ಮೊತ್ತದ ಸಂಪೂರ್ಣ ಹಣ ಪಾವತಿ ಮಾಡಿಲ್ಲ.

ನಂತರ ಆನ್ಲೈನ್ ಲೋನ್ ಆಯಪ್ ಕಂಪನಿಯು ದಂಪತಿಗೆ ಹಣ ನೀಡುವಂತೆ ಸೂಚಿಸಿದೆ. ಇದಲ್ಲದೆ ರಮ್ಯಾ ಲಕ್ಷ್ಮಿ ಅವರ ಚಿತ್ರ, ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿದೆ.

ಎರಡು ದಿನಗಳಲ್ಲಿ ಪೂರ್ಣ ಸಾಲವನ್ನು ಮರುಪಾವತಿಸದೇ ಇದ್ದರೆ ಶೀಘ್ರದಲ್ಲೇ ಆಕೆಯ ಮಾರ್ಫ್ ಮಾಡಿದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ದಂಪತಿಗೆ ಎಚ್ಚರಿಕೆ ನೀಡಿದೆ. ಇದರಿಂದ ದಂಪತಿ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ಟೂರಿಗೆ ತೆರಳಿ ಬಂಡ್ನಲ್ಲಿರುವ ಹೋಟೆಲ್ನಲ್ಲಿ ತಂಗಿದ್ದರು. ಈ ವೇಳೆ ಮಧ್ಯರಾತ್ರಿ ರಮ್ಯಾ ತನ್ನ ಸೋದರಸಂಬಂಧಿಗೆ ಕರೆ ಮಾಡಿ ತಾನು ಮತ್ತು ತನ್ನ ಪತಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದು, ತಮ್ಮ ಇಬ್ಬರೂ ಮಕ್ಕಳನ್ನು ನೋಡಿಕೊಳ್ಳುವಂತೆ ಹೇಳಿದ್ದಾರೆ.
ಕೂಡಲೇ ರಮ್ಯಾ ಸೋದರ ಇತರ ಸಂಬಂಧಿಕರಿಗೆ ಮಾಹಿತಿ ನೀಡಿ ಹೋಟೆಲ್ ಗೆ ಹೋದಾಗ ದಂಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸಾವನ್ನಪ್ಪಿದ್ದಾರೆ. ಇಬ್ಬರೂ ವಿಷ ಸೇವಿಸಿದ್ದಾರೆ ಎಂದು ತಿಳಿದು ಬಂದಿದೆ.
A couple in Andhra Pardesh died by suicide due to harassment by agents of a loan app. Subsequently, the state’s chief minister YS Jagan Moah Reddy directed officials to take stringent action against the online money-lending apps for harassment and blackmailing users.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm