ಬ್ರೇಕಿಂಗ್ ನ್ಯೂಸ್
12-09-22 10:37 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಸೋಮೇಶ್ವರ ದೇವಸ್ಥಾನದ ರಥಬೀದಿಯ ಕಡಲ ಕಿನಾರೆಯಲ್ಲಿ ಮರಳು ಕಳ್ಳತನ ತಡೆಯಲು ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮಡ್ಯಾರು ಸಾಯಿನಗರ ನಿವಾಸಿ ಸೂರಜ್, ಕುರ್ನಾಡು ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್ ಹಾಗೂ ಸೋಮೇಶ್ವರ ಮೂಡ ನಿವಾಸಿ ಪ್ರಜ್ವಲ್ ಎಂಬ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಸಿಸಿಟಿವಿ ಪುಡಿಗೈದ ಟಿಪ್ಪರನ್ನ ಜಪ್ತಿಗೊಳಿಸಿದ್ದಾರೆ.

ಸಾರ್ವಜನಿಕ ಆಸ್ತಿಯಾದ ಸಿಸಿಟಿವಿಯನ್ನ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದ ಎರಡು ದಿವಸಗಳ ಬಳಿಕ ಉಳ್ಳಾಲ ವಲಯ ಕಂದಾಯ ನಿರೀಕ್ಷಕ ಮಂಜುನಾಥ್ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಂಜುನಾಥ್ ಅವರ ದೂರು ದಾಖಲಿಸಿಕೊಂಡ ಉಳ್ಳಾಲ ಠಾಣೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ತರಾತುರಿಯಲ್ಲಿ ಬಂಧಿಸಿದ್ದಾರೆ.

ಶನಿವಾರ ನಸುಕಿನ ವೇಳೆ ಸೋಮೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನು ಆರೋಪಿಗಳು ಟಿಪ್ಪರ್ ಲಾರಿಯನ್ನ ಹಿಮ್ಮುಖವಾಗಿ ಚಲಾಯಿಸಿ ಧ್ವಂಸಗೊಳಿಸಿದ್ದರು. ಇಷ್ಟೇ ಅಲ್ಲದೆ ಪಕ್ಕದ ಸೋಮೇಶ್ವರ ಮೂಡ ಲೇ ಔಟ್ ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಮರಳು ಕಳ್ಳತನ ತಡೆಯಲು ಹಾಕಿದ್ದ ತಂತಿ ತಡೆ ಬೇಲಿಯನ್ನೂ ಮರಳು ಕಳ್ಳರು ಧ್ವಂಸಗೈದಿದ್ದರು. ಕಳೆದ ಎರಡು ವರುಷಗಳಿಂದಲೂ ಈ ಭಾಗದಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದರೂ ಉಳ್ಳಾಲ ಪೊಲೀಸರು ಏನೂ ಗೊತ್ತಿಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದರು. ಇದೀಗ ಸಿಸಿಟಿವಿ ಧ್ವಂಸ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಅಂಗೈ ಹುಣ್ಣಿಗೆ ಮುಲಾಮು ಹಚ್ಚುವ ಕೆಲಸ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
Illegal sand miners destroy cc camera and fence at ullal, four arrested and even the truck used for mining sand also has been seized by police in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am