ಬ್ರೇಕಿಂಗ್ ನ್ಯೂಸ್
08-10-20 09:58 am Mangaluru Correspondent ಕ್ರೈಂ
ಪುತ್ತೂರು, ಅಕ್ಟೋಬರ್ 8: ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಎರಡು ವರ್ಷಗಳ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಯನ್ನು ಗುಂಡು ಹಾರಿಸಿ ಕೊಲೆಗೈಯಲಾಗಿದೆ.
ಪೇಟೆ ವ್ಯಾಪ್ತಿಯ ಶಾಂತಿನಗರದಲ್ಲಿ ಮುಂಜಾನೆ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿ ಸಂಪತ್, ಈ ಹಿಂದೆ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.




ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ತನ್ನ ಕಾರಿನಲ್ಲಿ ಹೊರಟಿದ್ದ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಬಿದ್ದಿದ್ದು ಅಪಾಯ ಅರಿತ ಸಂಪತ್ ಕಾರು ಬಿಟ್ಟು ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಸಂಪತ್ ಕೂಡಲೇ ಅಲ್ಲಿಂದ ಬೇರೊಂದು ಮನೆಯತ್ತ ಓಡಿದ್ದು ಬೆನ್ನಟ್ಟಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದಾರೆ.
ಎರಡು ವರ್ಷಗಳ ಹಿಂದೆ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕಾರಿನಲ್ಲಿ ಬರುತ್ತಿದ್ದಾಗ ಬೇರೊಂದು ವಾಹನದಲ್ಲಿ ಅಪಘಾತಕ್ಕೀಡಾಗಿಸಿ ಕೊಲೆ ಮಾಡಲಾಗಿತ್ತು.
Shootout on Samaje Kalagi Balachandra murder accused in sullia causing his death as a result. The deceased has been identified as Sampath
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm