ಬ್ರೇಕಿಂಗ್ ನ್ಯೂಸ್
08-10-20 09:58 am Mangaluru Correspondent ಕ್ರೈಂ
ಪುತ್ತೂರು, ಅಕ್ಟೋಬರ್ 8: ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಎರಡು ವರ್ಷಗಳ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಯನ್ನು ಗುಂಡು ಹಾರಿಸಿ ಕೊಲೆಗೈಯಲಾಗಿದೆ.
ಪೇಟೆ ವ್ಯಾಪ್ತಿಯ ಶಾಂತಿನಗರದಲ್ಲಿ ಮುಂಜಾನೆ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿ ಸಂಪತ್, ಈ ಹಿಂದೆ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.




ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ತನ್ನ ಕಾರಿನಲ್ಲಿ ಹೊರಟಿದ್ದ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಬಿದ್ದಿದ್ದು ಅಪಾಯ ಅರಿತ ಸಂಪತ್ ಕಾರು ಬಿಟ್ಟು ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಸಂಪತ್ ಕೂಡಲೇ ಅಲ್ಲಿಂದ ಬೇರೊಂದು ಮನೆಯತ್ತ ಓಡಿದ್ದು ಬೆನ್ನಟ್ಟಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದಾರೆ.
ಎರಡು ವರ್ಷಗಳ ಹಿಂದೆ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕಾರಿನಲ್ಲಿ ಬರುತ್ತಿದ್ದಾಗ ಬೇರೊಂದು ವಾಹನದಲ್ಲಿ ಅಪಘಾತಕ್ಕೀಡಾಗಿಸಿ ಕೊಲೆ ಮಾಡಲಾಗಿತ್ತು.
Shootout on Samaje Kalagi Balachandra murder accused in sullia causing his death as a result. The deceased has been identified as Sampath
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm