ಬ್ರೇಕಿಂಗ್ ನ್ಯೂಸ್
17-09-22 12:56 pm HK News Desk ಕ್ರೈಂ
ಮೈಸೂರು, ಸೆ.17 : ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳ ಮಾರಾಟ ಪ್ರಕರಣದಲ್ಲಿ ಪೊಲೀಸರು, ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧಿಸಿ ದಾಳಿ ನಡೆಸಿದ ಕುವೆಂಪು ನಗರ ಪೊಲೀಸರು, ರಾಮಕೃಷ್ಣ ನಗರದ ಐ ಬ್ಲಾಕ್ ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್, ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್ ಗಳನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೈಸೂರಿನ ಮೊಹಮ್ಮದ್ ಶಹಭಾಜ್ ಮಲ್ಲಿಕ್ ಹಾಗೂ ಗಾಂಧಿನಗರ ನಿವಾಸಿ ಭಾಸ್ಕರ್ ಬಂಧಿತ ಇತರ ಆರೋಪಿಗಳಾಗಿದ್ದಾರೆ.

ಇದೇ ಆರೋಪಿಗಳು ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ನಗರದ ಉದಯಗಿರಿ ಎಂಬಲ್ಲಿನ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ್ದಾರೆ. ಮುಡಾಗೆ ಸೇರಿದ ನಿವೇಶನದ ದಾಖಲೆಯನ್ನು ಕಾಂಗ್ರೆಸ್ ಮುಖಂಡ ರಾಜಾರಾಂ ಅಂಡ್ ಟೀಂ ಪೋರ್ಜರಿ ಮಾಡಿರುವುದು ಕಂಡುಬಂದಿದೆ. ಅದಲ್ಲದೆ, ಅದೇ ನಿವೇಶನ ತೋರಿಸಿ ಬ್ಯಾಂಕ್ ನಲ್ಲಿ ಸಾಲ ಪಡೆಯಲು ಯತ್ನಿಸಿದ್ದೂ ಪತ್ತೆಯಾಗಿದೆ. ಈಗಾಗಲೇ ಹಲವು ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದ್ದು ಅಕ್ರಮ ದಾಖಲೆಗಳ ಮೂಲಕ ಆಸ್ತಿಗಳನ್ನ ಮಾರಾಟ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಕಾಂಗ್ರೆಸ್ ಮುಖಂಡ ರಾಜಾರಾಂ ವಿರುದ್ಧ ಕೊಲೆ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಖಾಸಗಿ ಗನ್ ಮ್ಯಾನ್ ಪಡೆದು ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಯೆಂದು ರಾಜಾರಾಂ ಬಿಲ್ಡ್ ಅಪ್ ನೀಡುತ್ತಿದ್ದ. ಮೈಸೂರು ನಗರದ ಪ್ರಭಾವಿ ಕಾಂಗ್ರೆಸ್ ಮುಖಂಡನಾಗಿರುವ ರಾಜಾರಾಮ್, ಪಕ್ಷ ಸೇರ್ಪಡೆಯಾದ ಒಂದೇ ವರ್ಷಕ್ಕೆ ಕಾಂಗ್ರೆಸ್ ನಗರ ಉಪಾಧ್ಯಕ್ಷ ಸ್ಥಾನ ಪಡೆದಿದ್ದ.

ಪೋರ್ಜರಿ ದಾಖಲೆ ಸೃಷ್ಟಿಸುವುದಕ್ಕಾಗಿ ನಕಲಿ ಸೀಲ್, ಇ-ಸ್ಟ್ಯಾಂಪ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನ ಬೆಂಗಳೂರಿನಿಂದ ತರುತ್ತಿದ್ದರು. ಎರಡು ದಿನಗಳ ಹಿಂದೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದ ಪೊಲೀಸರು, ಕಾಂಗ್ರೆಸ್ ಮುಖಂಡನ ಬಗ್ಗೆ ಗುರುತರ ಆರೋಪ ಕಂಡುಬಂದಿದ್ದರಿಂದ ಬಂಧಿಸಿದ್ದಾರೆ.
Fake government document racket busted, Five including congress Mysuru vice president Rajaram arrested.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm