ಬ್ರೇಕಿಂಗ್ ನ್ಯೂಸ್
17-09-22 12:56 pm HK News Desk ಕ್ರೈಂ
ಮೈಸೂರು, ಸೆ.17 : ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳ ಮಾರಾಟ ಪ್ರಕರಣದಲ್ಲಿ ಪೊಲೀಸರು, ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧಿಸಿ ದಾಳಿ ನಡೆಸಿದ ಕುವೆಂಪು ನಗರ ಪೊಲೀಸರು, ರಾಮಕೃಷ್ಣ ನಗರದ ಐ ಬ್ಲಾಕ್ ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್, ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್ ಗಳನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೈಸೂರಿನ ಮೊಹಮ್ಮದ್ ಶಹಭಾಜ್ ಮಲ್ಲಿಕ್ ಹಾಗೂ ಗಾಂಧಿನಗರ ನಿವಾಸಿ ಭಾಸ್ಕರ್ ಬಂಧಿತ ಇತರ ಆರೋಪಿಗಳಾಗಿದ್ದಾರೆ.

ಇದೇ ಆರೋಪಿಗಳು ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ನಗರದ ಉದಯಗಿರಿ ಎಂಬಲ್ಲಿನ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿದ್ದಾರೆ. ಮುಡಾಗೆ ಸೇರಿದ ನಿವೇಶನದ ದಾಖಲೆಯನ್ನು ಕಾಂಗ್ರೆಸ್ ಮುಖಂಡ ರಾಜಾರಾಂ ಅಂಡ್ ಟೀಂ ಪೋರ್ಜರಿ ಮಾಡಿರುವುದು ಕಂಡುಬಂದಿದೆ. ಅದಲ್ಲದೆ, ಅದೇ ನಿವೇಶನ ತೋರಿಸಿ ಬ್ಯಾಂಕ್ ನಲ್ಲಿ ಸಾಲ ಪಡೆಯಲು ಯತ್ನಿಸಿದ್ದೂ ಪತ್ತೆಯಾಗಿದೆ. ಈಗಾಗಲೇ ಹಲವು ನಿವೇಶನಗಳ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದ್ದು ಅಕ್ರಮ ದಾಖಲೆಗಳ ಮೂಲಕ ಆಸ್ತಿಗಳನ್ನ ಮಾರಾಟ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಕಾಂಗ್ರೆಸ್ ಮುಖಂಡ ರಾಜಾರಾಂ ವಿರುದ್ಧ ಕೊಲೆ ಆರೋಪದ ಮೇಲೆ ವಿಜಯನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಖಾಸಗಿ ಗನ್ ಮ್ಯಾನ್ ಪಡೆದು ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಯೆಂದು ರಾಜಾರಾಂ ಬಿಲ್ಡ್ ಅಪ್ ನೀಡುತ್ತಿದ್ದ. ಮೈಸೂರು ನಗರದ ಪ್ರಭಾವಿ ಕಾಂಗ್ರೆಸ್ ಮುಖಂಡನಾಗಿರುವ ರಾಜಾರಾಮ್, ಪಕ್ಷ ಸೇರ್ಪಡೆಯಾದ ಒಂದೇ ವರ್ಷಕ್ಕೆ ಕಾಂಗ್ರೆಸ್ ನಗರ ಉಪಾಧ್ಯಕ್ಷ ಸ್ಥಾನ ಪಡೆದಿದ್ದ.

ಪೋರ್ಜರಿ ದಾಖಲೆ ಸೃಷ್ಟಿಸುವುದಕ್ಕಾಗಿ ನಕಲಿ ಸೀಲ್, ಇ-ಸ್ಟ್ಯಾಂಪ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನ ಬೆಂಗಳೂರಿನಿಂದ ತರುತ್ತಿದ್ದರು. ಎರಡು ದಿನಗಳ ಹಿಂದೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದ ಪೊಲೀಸರು, ಕಾಂಗ್ರೆಸ್ ಮುಖಂಡನ ಬಗ್ಗೆ ಗುರುತರ ಆರೋಪ ಕಂಡುಬಂದಿದ್ದರಿಂದ ಬಂಧಿಸಿದ್ದಾರೆ.
Fake government document racket busted, Five including congress Mysuru vice president Rajaram arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am