ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am