ಬ್ರೇಕಿಂಗ್ ನ್ಯೂಸ್
08-10-20 07:02 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 8: ಐಸಿಸ್ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಅಹ್ಮದ್ ಅಬ್ದುಲ್ ಸಿದರ್ (40) ಮತ್ತು ಇರ್ಫಾನ್ ನಾಸಿರ್(33) ಬಂಧಿತರು. ಅಬ್ದುಲ್ ನಾಸಿರ್ ನನ್ನು ತಮಿಳುನಾಡಿನ ರಾಮನಾಥಪುರಂನಲ್ಲಿ ಬಂಧಿಸಿದ್ದರೆ, ಮತ್ತೊಬ್ಬ ಆರೋಪಿ ಇರ್ಫಾನ್ ನಾಸಿರ್ನನ್ನು ಬೆಂಗಳೂರಿನ ಫ್ರೇಜರ್ ಟೌನ್ನಲ್ಲಿ ಬಂಧಿಸಲಾಗಿದೆ.
ಅಹ್ಮದ್ ಅಬ್ದುಲ್ ಸಿದರ್, ಚೆನ್ನೈನ ಬ್ಯಾಂಕ್ ಒಂದರಲ್ಲಿ ಬ್ಯುಸಿನೆಸ್ ಅನಾಲಿಸ್ಟ್ ಆಗಿದ್ದ. ಇರ್ಫಾನ್ ನಾಸಿರ್, ಬೆಂಗಳೂರಿನಲ್ಲಿ ಅಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಉಗ್ರರು ಬೆಂಗಳೂರು ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎಗೆ ಐಸಿಸ್ ಸಂಪರ್ಕದ ಸುಳಿವು ಲಭಿಸಿತ್ತು. ಇತ್ತೀಚೆಗೆ ಬೆಂಗಳೂರು ಮೂಲದ ಡಾ.ಅಬ್ದುರ್ ರೆಹಮಾನ್ ಎಂಬಾತನನ್ನು ಬಂಧಿಸಿದ್ದ ವೇಳೆ, ಆತ ಆರೋಪಿಗಳ ಸುಳಿವು ನೀಡಿದ್ದ. 2014ರಲ್ಲಿ ಡಾ.ಅಬ್ದುರ್ ರೆಹಮಾನ್ ಜೊತೆಗೆ ಇವರೂ ಪ್ರಯಾಣಿಸಿದ್ದರು ಎಂದು ಮಾಹಿತಿ ಸಿಕ್ಕಿತ್ತು.
ಈ ಕುರಿತಂತೆ ಇನ್ನಷ್ಟು ತನಿಖೆ ನಡೆಸಿದ ವೇಳೆ, ಬೆಂಗಳೂರಿನಲ್ಲಿ ಖುರಾನ್ ಸರ್ಕಲ್ ಎಂದು ಗ್ರೂಪ್ ಮಾಡಿಕೊಂಡು ಯುವಕರನ್ನು ಸಿರಿಯಾದ ಐಸಿಸ್ ನೆಟ್ವರ್ಕ್ ಸೇರುವಂತೆ ಪ್ರೇರೇಪಣೆ ನೀಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ, ಇವರಿಬ್ಬರು ಹಿಜ್ಬ್-ಉತ್-ತಾಹಿರ್ ಎಂಬ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಇದರ ಜೊತೆಯಲ್ಲೇ, ತಮ್ಮ ತಂಡದ ಸದಸ್ಯರು ಹಾಗೂ ಗುಂಪುಗಳ ಮೂಲಕ ಹಣ ಸಂಗ್ರಹ ಕಾರ್ಯದಲ್ಲಿ ಸಕ್ರಿಯರಾಗಿದ್ದರು.
ಅಹ್ಮದ್ ಅಬ್ದುಲ್ ಹಾಗೂ ಇರ್ಫಾನ್ ನಾಸಿರ್ ಮನೆಗಳಲ್ಲಿ ಎನ್ಐಎ ಶೋಧ ಕಾರ್ಯ ನಡೆಸಿದೆ. ಗುರುಪ್ಪನ ಪಾಳ್ಯ ಹಾಗೂ ಫ್ರೇಜರ್ ಟೌನ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ವೇಳೆ ಧಾರ್ಮಿಕ ಭಾವನೆ ಪ್ರಚೋದಿಸುವ ಲೇಖನಗಳು, ವಿದ್ಯುನ್ಮಾನ ಉಪಕರಣಗಳು ಲಭ್ಯವಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
NIA arrests two suspected IS terrorists, Ahamed Abdul Cader, 40, and Irfan Nasir, 33, from Bengaluru
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm