ಬ್ರೇಕಿಂಗ್ ನ್ಯೂಸ್
23-09-22 02:08 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಸೆ.23: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ತಾಲ್ಲೂಕು ಕಚೇರಿಗೆ ದಾಳಿ ನಡೆಸಿದ ವ್ಯಕ್ತಿಯೊಬ್ಬ ಟಿಪ್ ಟಾಪ್ ಆಗಿ ಬಂದು ತಹಶೀಲ್ದಾರ್ ಅವರನ್ನೇ ವಿಚಾರಣೆಗೊಳಪಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಹಸೀಲ್ದಾರ್ ಪೊಲೀಸ್ ದೂರು ನೀಡಿದ್ದಾರೆ.
ಫೈಲ್ ಹಿಡಿದು ಬಂದಿದ್ದ ವ್ಯಕ್ತಿ ಧಿಮಾಕಿನ ಶೈಲಿಯಲ್ಲಿ ತಹಶೀಲ್ದಾರನ್ನು ವಿಚಾರಣೆ ನಡೆಸಿದ್ದು ಲೋಕಾಯುಕ್ತರ ರೀತಿ ಪೋಸು ನೀಡಿದ್ದ. ಆದರೆ ವ್ಯಕ್ತಿಯ ಚಲನವಲನದಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಲೋಕಾಯುಕ್ತ ಅಧಿಕಾರಿ ಎನ್ನುವ ಬಗ್ಗೆ ಐಡಿ ತೋರಿಸುವಂತೆ ಹೇಳಿದ್ದಾರೆ. ದಾಖಲೆ ಕೇಳುತ್ತಿದ್ದಂತೆ ನಕಲಿ ಅಧಿಕಾರಿ ಹೊರಗೆ ಓಡಿದ್ದು ತಪ್ಪಿಸಿಕೊಂಡಿದ್ದಾನೆ.

ತಹಶೀಲ್ದಾರ್ ಗಣಪತಿ ಶಾಸ್ತ್ರಿ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಫೈಲ್ ನಲ್ಲಿ ಯಾವುದೋ ದಾಖಲೆ ಹಿಡ್ಕೊಂಡು ಬಂದಿದ್ದು ಬೆದರಿಸಿ ಹಣ ವಸೂಲಿಗಾಗಿ ಬಂದಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ಫೈಲ್ ಹಿಡಿದು ಏನೋ ಅಕ್ರಮದ ಬಗ್ಗೆ ದಾಖಲೆ ತೋರಿಸಿ ಬೆದರಿಸುವ ತಂತ್ರ ಮಾಡಿದ್ದ. ಆದರೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದು ತಹಶೀಲ್ದಾರ್ ಹುದ್ದೆ ಗಿಟ್ಟಿಸಿಕೊಂಡಿದ್ದ ಗಣಪತಿ ಶಾಸ್ತ್ರಿ ಇದರಿಂದ ಧೃತಿಗೆಡದೆ ನಕಲಿ ಅಧಿಕಾರಿಯನ್ನೇ ಪ್ರಶ್ನಿಸಿದ್ದಾರೆ.
ಅಧಿಕಾರಿಯನ್ನು ಬೆದರಿಸಿ ಹಣ ಕೀಳಬಹುದೆಂದು ಬಂದಿದ್ದ ವ್ಯಕ್ತಿಯೇ ಕೊನೆಗೆ ಪೇಚಿಗೆ ಸಿಲುಕಿದ್ದು ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ತಹಶೀಲ್ದಾರ್ ಗಣಪತಿಶಾಸ್ತ್ರಿ ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
Chikkaballapur Man Poses as Lokayukta officer and investigates Thalisadar, runs when asked to show his ID card.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm