ಬ್ರೇಕಿಂಗ್ ನ್ಯೂಸ್
09-10-20 12:56 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 09 : ಆನ್ ಲೈನ್ ವಂಚನೆ ಬಗ್ಗೆ ಎಷ್ಟೇ ಪ್ರಕರಣಗಳು ವರದಿಯಾದರೂ, ಜನ ಎಚ್ಚತ್ತುಕೊಳ್ಳಲ್ಲ. ಇಲ್ಲೊಬ್ಬರು ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ 12 ಲಕ್ಷದ ಆಸೆಗೆ ಬಿದ್ದು ಬರೋಬ್ಬರಿ 26,47,650 ರೂಪಾಯಿ ಕಳಕೊಂಡಿದ್ದಾರೆ.
ಉಡುಪಿಯ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪನಿ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ನೀವು ರೂಪಾಯಿ 12 ಲಕ್ಷ ಬಹುಮಾನ ಗೆದ್ದಿದ್ದೀರಿ, ಅದನ್ನು ಪಡೆಯಲು ನಮ್ಮನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ನಾಗರಾಜ್ ಕರೆ ಮಾಡಿದ್ದು ಬಹುಮಾನದ ಹಣ ಪಡೆಯಲು ನೋಂದಣಿ ಶುಲ್ಕ 12,೦೦೦ ರೂ. ತೆರಬೇಕು ಎಂದು ತಿಳಿಸಿದ್ದರು.
ಅದರಂತೆ, 2019ರ ಎ.4ರಂದು ನಾಗರಾಜ್, 12 ಸಾವಿರ ರೂ. ಖಾತೆಗೆ ಪಾವತಿಸಿದ್ದರು. ಅನಂತರ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಎಂಬವರು, ಬೇರೆ ಸಂಖ್ಯೆಗಳಿಂದ ಕರೆ ಮಾಡಿ ತಾವು ನ್ಯಾಪ್ಟಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದರು. ಅಲ್ಲದೆ, 12 ಲಕ್ಷ ಬಹುಮಾನದ ಮೊತ್ತ ಪಡೆಯಲು ಜಿಎಸ್ ಟಿ, ಚಾರ್ಜ್ ಅಂತ ಶುಲ್ಕ ಕಟ್ಟಬೇಕು ಎಂದು ನಂಬಿಸಿದ್ದರು. ಹೀಗೆ ನಾಗರಾಜ್ ಭಟ್, 2019ರ ಎ.4ರಿಂದ ಜು.28ರ ನಡುವೆ ಜಿ.ಎಸ್.ಟಿ. ತೆರಿಗೆ, ವೆರಿಫಿಕೇಶನ್ ಚಾರ್ಜ್, ಸಬ್ಚಾರ್ಜ್ ಎಂದು ಒಟ್ಟು 26,47,650 ರೂ. ಮೊತ್ತವನ್ನು ವಿವಿಧ ಖಾತೆಗಳಿಗೆ ಜಮೆ ಮಾಡಿದ್ದಾರೆ.

ಕೊನೆಗೆ, ನಾಗರಾಜ್ ಭಟ್ ತಾನು ಮೋಸ ಹೋಗಿದ್ದು ಅರಿವಾಗಿದ್ದು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Man looses 26 lakhs in online fraud later registers case in cyber crime. The victim has been identified as Nagraj Bhat from Udupi.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm