ಬ್ರೇಕಿಂಗ್ ನ್ಯೂಸ್
09-10-20 12:56 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 09 : ಆನ್ ಲೈನ್ ವಂಚನೆ ಬಗ್ಗೆ ಎಷ್ಟೇ ಪ್ರಕರಣಗಳು ವರದಿಯಾದರೂ, ಜನ ಎಚ್ಚತ್ತುಕೊಳ್ಳಲ್ಲ. ಇಲ್ಲೊಬ್ಬರು ನ್ಯಾಪ್ಟಾಲ್ ಕಂಪೆನಿ ಹೆಸರಿನಲ್ಲಿ 12 ಲಕ್ಷದ ಆಸೆಗೆ ಬಿದ್ದು ಬರೋಬ್ಬರಿ 26,47,650 ರೂಪಾಯಿ ಕಳಕೊಂಡಿದ್ದಾರೆ.
ಉಡುಪಿಯ ನಾಗರಾಜ್ ಭಟ್ ಅವರ ವಿಳಾಸಕ್ಕೆ ನ್ಯಾಪ್ಟಾಲ್ ಕಂಪನಿ ಹೆಸರಿನಲ್ಲಿ ಸ್ಕ್ರಾಚ್ ಕೂಪನ್ ಬಂದಿತ್ತು. ಅದರಲ್ಲಿ ನೀವು ರೂಪಾಯಿ 12 ಲಕ್ಷ ಬಹುಮಾನ ಗೆದ್ದಿದ್ದೀರಿ, ಅದನ್ನು ಪಡೆಯಲು ನಮ್ಮನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದ ಮೊಬೈಲ್ ಸಂಖ್ಯೆಗೆ ನಾಗರಾಜ್ ಕರೆ ಮಾಡಿದ್ದು ಬಹುಮಾನದ ಹಣ ಪಡೆಯಲು ನೋಂದಣಿ ಶುಲ್ಕ 12,೦೦೦ ರೂ. ತೆರಬೇಕು ಎಂದು ತಿಳಿಸಿದ್ದರು.
ಅದರಂತೆ, 2019ರ ಎ.4ರಂದು ನಾಗರಾಜ್, 12 ಸಾವಿರ ರೂ. ಖಾತೆಗೆ ಪಾವತಿಸಿದ್ದರು. ಅನಂತರ ಅಮಿತ್ ಬಿಸ್ವಾಸ್, ಚೇತನ್ ಕುಮಾರ್ ಎಂಬವರು, ಬೇರೆ ಸಂಖ್ಯೆಗಳಿಂದ ಕರೆ ಮಾಡಿ ತಾವು ನ್ಯಾಪ್ಟಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿದ್ದರು. ಅಲ್ಲದೆ, 12 ಲಕ್ಷ ಬಹುಮಾನದ ಮೊತ್ತ ಪಡೆಯಲು ಜಿಎಸ್ ಟಿ, ಚಾರ್ಜ್ ಅಂತ ಶುಲ್ಕ ಕಟ್ಟಬೇಕು ಎಂದು ನಂಬಿಸಿದ್ದರು. ಹೀಗೆ ನಾಗರಾಜ್ ಭಟ್, 2019ರ ಎ.4ರಿಂದ ಜು.28ರ ನಡುವೆ ಜಿ.ಎಸ್.ಟಿ. ತೆರಿಗೆ, ವೆರಿಫಿಕೇಶನ್ ಚಾರ್ಜ್, ಸಬ್ಚಾರ್ಜ್ ಎಂದು ಒಟ್ಟು 26,47,650 ರೂ. ಮೊತ್ತವನ್ನು ವಿವಿಧ ಖಾತೆಗಳಿಗೆ ಜಮೆ ಮಾಡಿದ್ದಾರೆ.

ಕೊನೆಗೆ, ನಾಗರಾಜ್ ಭಟ್ ತಾನು ಮೋಸ ಹೋಗಿದ್ದು ಅರಿವಾಗಿದ್ದು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Man looses 26 lakhs in online fraud later registers case in cyber crime. The victim has been identified as Nagraj Bhat from Udupi.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm