ಬ್ರೇಕಿಂಗ್ ನ್ಯೂಸ್
04-10-22 04:24 pm HK News Desk ಕ್ರೈಂ
ಗದಗ, ಅ.04: ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಹಾಡಹಗಲೇ ಮಹಿಳೆಯ ಕೊಲೆ ನಡೆದಿದ್ದು ಬೆಟಗೇರಿ ಜನರು ಬೆಚ್ಚಿಬಿದ್ದಿದ್ದಾರೆ.
ನಗರದ ಗಂಗಿಮಡಿ ಬಡಾವಣೆ ನಿವಾಸಿಯಾಗಿದ್ದ ಶೋಭಾ ಲಮಾಣಿ ಅಲಿಯಾಸ್ ಮಿನಾಜ್ ಬೇಪಾರಿ ಕೊಲೆಯಾದ ಮಹಿಳೆ. ಹಳೆಯ ದ್ವೇಷದ ಹಿನ್ನೆಲೆ ಚೇತನ್ ಕುಮಾರ್ ಹಾಗೂ ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ ಅಂತಾ ಎಸ್.ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.
ನ್ಯಾಯಾಲಯದ ಕಲಾಪ ಮುಗಿಸಿಕೊಂಡು ಆಟೋ ಏರಿ ಮಧ್ಯಾಹ್ನ ನಗರದ ಎಸ್.ಬಿ ಬೇಕರಿ ಬಳಿ ಬಂದಾಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಮೃತ ಶೋಭಾ ಮಗುವಿಗಾಗಿ ಬೇಕರಿ ತಿನಿಸು ಖರೀದಿಸಲು ಬೇಕರಿಗೆ ಬಂದಿದ್ದರು. ಅಲ್ಲೇ ಕಾಯ್ದು ಕೂತಿದ್ದ ಇಬ್ಬರು ಆರೋಪಿಗಳು ಚಾಕುವಿನಿಂದ ಕತ್ತು ಸೀಳಿಸಿದ್ದಾರೆ.
ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಣ್ಣನ ಹತ್ಯೆಗೆ ಪ್ರತಿಕಾರ ;
ಗದಗ ನಗರದ ಗಂಗಿಮಡಿಯಲ್ಲಿ 2020 ರಲ್ಲಿ ರಮೇಶ್ ಕುಮಾರ್ ಎಂಬಾತನ ಕೊಲೆ ನಡೆದಿದ್ದು. ಕೊಲೆ ಕೇಸ್ ವಿಚಾರವಾಗಿ ಶೋಭಾ ಅಲಿಯಾಸ್ ಮಿನಾಜ್ ಹಾಗೂ ಗಂಡ ವಾಸೀಂ ಬೇಪಾರಿ ಈ ಕೊಲೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಇಬ್ಬರು ಹೊರ ಬಂದಿದ್ದರು. ಜಾಮೀನು ಪಡೆದ ನಂತರ ಇಬ್ಬರು ಹುಬ್ಬಳ್ಳಿಯಲ್ಲಿ ವಾಸವಿದ್ದರು.
ಕೋರ್ಟ್ ಕಲಾಪ ಇದ್ದಾಗ ಗದಗ ನಗರಕ್ಕೆ ಬರುತ್ತಿದ್ದರು. ಪ್ರಕರಣದ ವಿಚಾರಣೆಗೆ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಶೋಭಾ ಬಂದಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಕಾಯುತ್ತಿದ್ದ ಆರೋಪಿಗಳಾದ ಚೇತನ್ ಕುಮಾರ್, ರೋಹನ್ ಕುಮಾರ್ ಹತ್ಯೆ ಮಾಡಿದ್ದಾರೆ.
2020 ರಮೇಶ್ ಕೊಲೆ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.
Revenge murder in Gadag, woman murdered after slitting throat in Bakery on her back from the court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am