ಬ್ರೇಕಿಂಗ್ ನ್ಯೂಸ್
08-10-22 05:07 pm HK News Desk ಕ್ರೈಂ
ಕೊಚ್ಚಿ, ಅ.8: ಅಫ್ಘಾನಿಸ್ತಾನದಲ್ಲಿ ತಯಾರಿಸಿದ ಅಂದಾಜು 1200 ಕೋಟಿ ರೂಪಾಯಿ ಮೌಲ್ಯದ 200 ಕೆಜಿ ಹೆರಾಯಿನ್ ಅನ್ನು ಭಾರತದ ನೌಕಾಪಡೆ ಹಾಗೂ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ (ಎನ್ಸಿಬಿ) ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದುಕೊಂಡಿದೆ
ಇರಾನ್ ಹಡಗಿನಲ್ಲಿ ಹೆರಾಯಿನ್ ತುಂಬಿಕೊಂಡು ಪಾಕಿಸ್ತಾನ ಮಾರ್ಗವಾಗಿ ಭಾರತಕ್ಕೆ ತರಲಾಗುತ್ತಿತ್ತು. ಹೆರಾಯಿನ್ ಅನ್ನು ಭಾರತ ಮತ್ತು ಶ್ರೀಲಂಕಾದಲ್ಲಿ ಮಾರಾಟ ಮಾಡುವ ಪ್ರಯತ್ನ ನಡೆದಿತ್ತು. ಸದ್ಯ ಅಷ್ಟೂ ಡ್ರಗ್ಸ್ ಅನ್ನು ಸೀಜ್ ಮಾಡಿರುವ ಅಧಿಕಾರಿಗಳು 6 ಇರಾನ್ ಪ್ರಜೆಗಳನ್ನು ಬಂಧಿಸಿದ್ದಾರೆ.

ಡ್ರಗ್ಸ್ ಅನ್ನು ಜಲನಿರೋಧಕ, ಏಳು ಪದರದ ಪ್ಯಾಕೇಜಿಂಗ್ನಲ್ಲಿ ಇರಾನಿನ ಹಡಗಿನಲ್ಲಿ ಸಾಗಿಸಿ, ಅದನ್ನು ಶ್ರೀಲಂಕಾದ ಹಡಗಿಗೆ ವರ್ಗಾಯಿಸಲು ಮುಂದಾಗಿದ್ದರು. ಆದರೆ, ಗುರುವಾರ ಕೇರಳದ ಕೊಚ್ಚಿಯಲ್ಲಿ ನೌಕಾಪಡೆ ಮತ್ತು ಎನ್ಸಿಬಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೊಡ್ಡ ಡ್ರಗ್ಸ್ ಜಾಲವೇ ಸಿಕ್ಕಿಬಿದ್ದಿದೆ ಎಂದು ಎನ್ಸಿಬಿಯ ಹಿರಿಯ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಡ್ರಗ್ಸ್ ಪ್ಯಾಕೆಟ್ಗಳು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕಾರ್ಟೆಲ್ಗಳಿಗೆ ವಿಶಿಷ್ಟವಾದ ಗುರುತುಗಳು ಮತ್ತು ಪ್ಯಾಕಿಂಗ್ ವಿಶೇಷತೆಗಳನ್ನು ಹೊಂದಿವೆ ಎಂದು ಅಧಿಕಾರಿ ಹೇಳಿದರು. ಕೆಲವು ಡ್ರಗ್ ಪ್ಯಾಕೆಟ್ಗಳ 'ಚೇಳು' ಸೀಲ್ ಗುರುತುಗಳನ್ನು ಹೊಂದಿದ್ದರೆ, ಇತರವುಗಳು 'ಡ್ರ್ಯಾಗನ್' ಸೀಲ್ ಗುರುತುಗಳನ್ನು ಹೊಂದಿದ್ದವು ಎಂದು ತಿಳಿಸಿದರು.
ಬಹುಶಃ ಹೆರಾಯಿನ್ ಅನ್ನು ಮೊದಲು ಪಾಕಿಸ್ತಾನದಿಂದ ದೋಣಿಯಲ್ಲಿ ಕಳುಹಿಸಲಾಗಿದೆ. ಇದಾದ ಬಳಿಕ ಮಾರ್ಗ ಮಧ್ಯೆ ಇರಾನ್ ಹಡಗಿಗೆ ಡ್ರಗ್ಸ್ ವಿನಿಮಯ ಮಾಡಲಾಗಿದೆ. ನಂತರ ಶ್ರೀಲಂಕಾದ ಹಡಗಿಗೆ ವಿನಿಮಯ ಮಾಡಿಕೊಳ್ಳುವಷ್ಟರಲ್ಲಿ ಭಾರತೀಯ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೆ. ಅಲ್ಲದೆ, ಇರಾನ್ ಹಡಗಿನಲ್ಲಿದ್ದ ವ್ಯಕ್ತಿಗಳು ಸಮುದ್ರಕ್ಕೆ ಹಾರಿ ತಪ್ಪಿಸಿಕೊಳ್ಳಲು ಮತ್ತು ಹೆರಾಯಿನ್ ಅನ್ನು ನೀರಿನಲ್ಲಿ ಎಸೆಯಲು ಪ್ರಯತ್ನಿಸಿದರು ಎಂದು ಎನ್ಸಿಬಿ ಅಧಿಕಾರಿ ಸಿಂಗ್ ಹೇಳಿದ್ದಾರೆ.
In a joint operation with the Indian Navy, the Narcotics Control Bureau intercepted an Iranian fishing vessel off the coast of Kochi and seized 200 kg of Afghan-origin heroin, worth about 1200 crore rupees in the international market. Six crew members of the boat, all Iranian nationals, have been taken into custody and are being interrogated.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm