ಬ್ರೇಕಿಂಗ್ ನ್ಯೂಸ್
11-10-22 12:42 pm Mangalore Correspondent ಕ್ರೈಂ
ಉಳ್ಳಾಲ, ಅ.11: ಗಣಿ ಇಲಾಖೆಯವರು ಜಪ್ತಿ ಪಡಿಸಿದ್ದ ಮರಳನ್ನು ಮಧ್ಯರಾತ್ರಿ ದಂಧೆಕೋರರೇ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು ಇದನ್ನ ಪ್ರಶ್ನಿಸಲು ಹೋದ ವ್ಯಕ್ತಿಯನ್ನು ಟಿಪ್ಪರ್ ಡಿಕ್ಕಿಯಾಗಿಸಿ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.
ಮರಳು ದಂಧೆಕೋರರ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಉಚ್ಚಿಲ ನಿವಾಸಿ ಕಿಶೋರ್(52) ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಉಚ್ಚಿಲದ ಬಟ್ಟಂಪಾಡಿ ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳನ್ನು ಇತ್ತೀಚೆಗೆ ಗಣಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದರು. ಆದರೆ ಜಪ್ತಿಗೊಳಿಸಿದ್ದ ಮರಳನ್ನೇ ರಾತ್ರಿ ವೇಳೆ ಸದ್ದಿಲ್ಲದೆ ಬೇರೆಡೆ ಸಾಗಿಸಲಾಗುತ್ತಿದ್ದು ಪ್ರಶ್ನಿಸಲು ಹೋದವರಿಗೆ ಇಲಾಖೆಯ ಆದೇಶವಿದೆ ಎಂದು ದಂಧೆಕೋರರು ಬೆದರಿಸಿ, ಹಲ್ಲೆ ಮಾಡಲು ಮುಂದಾಗುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಉಚ್ಚಿಲದ ರೈಲ್ವೇ ಗೇಟ್ ಬಳಿ ನಿನ್ನೆ ರಾತ್ರಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನ ಕಿಶೋರ್ ಅವರು ತನ್ನ ಸ್ಕೂಟರಲ್ಲಿ ಬೆನ್ನಟ್ಟಿದ್ದು, ಇದನ್ನ ಗಮನಿಸಿದ ಟಿಪ್ಪರ್ ಚಾಲಕ ಹಠತ್ತಾಗಿ ಬ್ರೇಕ್ ಹೊಡೆದು ಅಪಘಾತ ನಡೆಸಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಟಿಪ್ಪರನ್ನ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪಿಎಸ್ಸೈ ಪ್ರದೀಪ್ ಟಿ.ಆರ್ ಮರಳು ದಂಧೆಕೋರರ ಪರ ಬ್ಯಾಟಿಂಗ್ ನಡೆಸಿದ್ದು, ಉದ್ರಿಕ್ತ ಸ್ಥಳೀಯರು ಪಿಎಸ್ಸೈಯನ್ನ ತರಾಟೆಗೆ ತೆಗೆದಿದ್ದಾರೆ. ಜನರ ಆಕ್ರೋಶಕ್ಕೆ ಬಗ್ಗಿದ ಪೊಲೀಸರು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಮತ್ತು ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.
ಪೋಲೀಸರು, ಅಧಿಕಾರಿಗಳು ಅಕ್ರಮ ಮರಳು ಸಾಗಾಟದ ಪರ ವಹಿಸಿದ್ದು, ರಾತ್ರಿಯಿಂದ ಬೆಳಗ್ಗಿನ ವರೆಗೂ ಅಕ್ರಮ ಮರಳು ಸಾಗಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Mangalore Illegal sand mining in Ullal, seized sand robbed, truck rams two wheeler that hinders, people protest.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am