ಬ್ರೇಕಿಂಗ್ ನ್ಯೂಸ್
21-10-22 01:47 pm Mangalore Correspondent ಕ್ರೈಂ
ಮಂಗಳೂರು, ಅ.21: ಅಪ್ರಾಪ್ತ ವಯಸ್ಕ ಬಾಲಕಿಯ ಜೊತೆ ಸ್ನೇಹ ಸಂಪಾದಿಸಿ, ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ ಟೇಬಲ್ ಒಬ್ಬರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲಾ ಮೀಸಲು ಪಡೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಬಜ್ಪೆ ನಿವಾಸಿ ಪ್ರವೀಣ್ ಸಾಲ್ಯಾನ್(35) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ.
ಬಜ್ಪೆ ಸಿದ್ದಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು, ಆನಂತರ ತಾನು ಪ್ರೀತಿಸುವುದಾಗಿ ನಾಟಕ ಮಾಡಿದ್ದ. ಮೊಬೈಲ್ ಸಂಖ್ಯೆ ಪಡೆದು ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಈ ನಡುವೆ, ತನ್ನ ಗುಪ್ತಾಂಗದ ಚಿತ್ರಗಳನ್ನು ಕಳುಹಿಸಿ ಆಕೆಯ ಜೊತೆಗೆ ಅಶ್ಲೀಲ ಸಂಭಾಷಣೆಗಳನ್ನು ನಡೆಸುತ್ತಿದ್ದ.
ಬಳಿಕ ಆಕೆಯಲ್ಲಿ ಒಂದು ಲಕ್ಷ ರೂ. ಹಣ ನೀಡಬೇಕು ಎಂದು ಬ್ಲಾಕ್ಮೇಲ್ ಮಾಡಿದ್ದ. ಇದರಿಂದ ಆತಂಕಗೊಂಡಿದ್ದ ಯುವತಿ 2015ರ ಜೂನ್ 10ರಂದು ನಸುಕಿನಲ್ಲಿ ತನ್ನ ಮನೆಯ ಬೆಡ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಗೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಪ್ರವೀಣ್ ಸಾಲ್ಯಾನ್ ಕಾರಣವೆಂದು ಸ್ಪಷ್ಟವಾಗಿ ನಮೂದಿಸಿದ್ದಳು. ವಿಚಾರಣೆ ನಡೆಸಿದ್ದ ಪೊಲೀಸರು ಆಕೆಯ ಡೆತ್ ನೋಟ್, ಮೊಬೈಲಿನಲ್ಲಿದ್ದ ಆಕೆಯೊಂದಿಗೆ ಸಂಭಾಷಣೆ ನಡೆಸಿದ್ದ ಸಾಕ್ಷ್ಯಗಳನ್ನು ಆಧರಿಸಿ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಐಪಿಸಿ ಸೆಕ್ಷನ್ 305ರಡಿ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ, ಸೆಕ್ಷನ್ 12ರ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Praveen Salian (35), a police constable of District Armed Reserve (DAR) police, was sentenced to life imprisonment as the accusation of sexual harassment and abetting suicide of a minor girl on him was proved in the court.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm