ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm