ಬ್ರೇಕಿಂಗ್ ನ್ಯೂಸ್
22-10-22 11:28 am Mangalore Correspondent ಕ್ರೈಂ
ಪುತ್ತೂರು, ಅ.21: ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮನೆಗೆ ಬಂದಿದ್ದ ಇಬ್ಬರು ಯುವಕರು ಮಹಿಳೆಯ ಜೊತೆ ಸಲುಗೆ ಮಾತನಾಡಿದ್ದಲ್ಲದೆ, ಜೊತೆಗೆ ಮಲಗಲು ಅವಕಾಶ ನೀಡಿದರೆ ಪುಕ್ಕಟೆಯಾಗಿ ಬೆಡ್ ಶೀಟ್ ಕೊಡುತ್ತೇವೆಂದು ಹೇಳಿ, ಮಾನಭಂಗಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿ ನಡೆದಿದೆ.
ನೀಲಿ ಬಣ್ಣದ ಕಾರಿನಲ್ಲಿ ಬಂದಿದ್ದ ರಫೀಕ್ ಮತ್ತು ರಮಿಯುದ್ದೀನ್ ಎಂಬ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ಮಹಿಳೆ ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಡ್ ಶೀಟ್ ರೇಟ್ ಹೇಳುವಂತೆ ಹೇಳಿದ ಮಹಿಳೆಯರಿಗೆ, ಬೆಡ್ ಶೀಟ್ ನಿಮಗೆ ಕಡಿಮೆ ದರಕ್ಕೆ ಕೊಡುತ್ತೇವೆ ಎನ್ನುತ್ತಾ ಮನೆಯೊಳಗೆ ಬಂದಿದ್ದಾರೆ. ಬೆಡ್ ಶೀಟ್ ರೇಟ್ ಹೇಳದೆ, ನಿಮ್ಮಲ್ಲಿ ಹಣ ಇಲ್ಲದಿದ್ದರೆ ಪರ್ವಾಗಿಲ್ಲ. ನಮ್ಮ ಜೊತೆ ಮಲಗಲು ಅವಕಾಶ ನೀಡಿದರೆ ಬೆಟ್ ಶೀಟ್ ಫ್ರೀ ಕೊಡುತ್ತೇವೆ. ಜೊತೆಗೆ ಒಂದಷ್ಟು ಹಣವನ್ನೂ ಕೊಡುತ್ತೇವೆ ಎಂದು ಪುಸಲಾಯಿಸಿದ್ದಾರೆ. ನೀವು ಮನೆಯಿಂದ ಹೋಗಿ ಎಂದು ಮಹಿಳೆಯರು ಬೈದಾಗ, ಕೈಯನ್ನು ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ದೂರಲಾಗಿದೆ. ಬಳಿಕ ಮಹಿಳೆ ಜೋರು ಬೊಬ್ಬೆ ಹೊಡೆದಾಗ ಅವರು ಓಡಿ ಹೋಗಿದ್ದಾರೆ. ಘಟನೆ ಸಂಬಂಧಿಸಿ ಎಸ್ಸಿ-ಎಸ್ಟಿ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಇದೇ ವಿಚಾರದಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ರಫೀಕ್ ಮತ್ತು ರಮಿಯುದ್ದೀನ್ ದೋಲ್ಪಾಡಿಯ ಘಟನೆಯ ಬಳಿಕ ಕಾಣಿಯೂರು ಗ್ರಾಮಕ್ಕೆ ತಲುಪಿದಾಗ ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ. ರಸ್ತೆಗೆ ಪಿಕಪ್ ಅಡ್ಡ ಇಟ್ಟು ಯುವಕರಿದ್ದ ಕಾರನ್ನು ನಿಲ್ಲಿಸಿ, ಅವರಿಗೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು. ಕಾರು ಜಖಂಗೊಳಿಸಿ, ಬೆಡ್ ಶೀಟ್ ಗಳನ್ನು ಹಾಳುಗೆಡವಿದ್ದಾರೆಂದು ರಫೀಕ್ ಮತ್ತು ರಮಿಯುದ್ದೀನ್ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Mangalore Sexual assault in the name of selling blankets, two held at Kadaba.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am