ಬ್ರೇಕಿಂಗ್ ನ್ಯೂಸ್
27-10-22 02:52 pm Mangalore Correspondent ಕ್ರೈಂ
ಉಳ್ಳಾಲ, ಅ.27 : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ.
ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆಗೈದವರು. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ ತಂದಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಇನ್ನೂರು ಗುತ್ತು ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾನೆ. ಪಕ್ಕದ ಮನೆಯ ಶಕುಂತಳ ಶೆಟ್ಟಿ ಅವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಶೋಭಾ ಅವರು ಬೆಡ್ ರೂಮಿನ ಮಂಚದಲ್ಲಿ ಹೆಣವಾಗಿದ್ದರು. ಗಾಬರಿಗೊಂಡ ಶಕುಂತಳಾ ಅವರು ಮನೆಮಂದಿಗೆ ತಿಳಿಸಿದಾಗ ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ.




ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಪತ್ನಿ ಅಲ್ಲದೆ ಮಗಳ ಮೇಲೂ ನಿರಂತರವಾಗಿ ಸಂಶಯ ಪಡುತ್ತಿದ್ದರು ಎನ್ನಲಾಗಿದೆ. ಇದರಿಂದ ಸೈಕೋ ರೀತಿ ವರ್ತಿಸುತ್ತಿದ್ದು ನೆರೆಹೊರೆಯವರಲ್ಲೂ ವಿನಾ ಕಾರಣ ತಗಾದೆ ಎತ್ತಿ ಗಲಾಟೆ ನಡೆಸುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಪತ್ನಿ ಶೋಭಾ ಅವರಿಗೆ ಯಾರಾದರೂ ಫೋನ್ ಕರೆ ಮಾಡಿದರೂ ಸೈಕೋ ಪತಿರಾಯ ಗಲಾಟೆ ನಡೆಸುತ್ತಿದ್ದನೆಂದು ನೆರೆಹೊರೆಯ ನಿವಾಸಿಗಳು ತಿಳಿಸಿದ್ದಾರೆ.




ಶೋಭಾ ಅವರ ಕಿರಿಯ ಮಗಳು ಕಾವ್ಯ ಎರಡು ವರ್ಷದ ಹಿಂದಷ್ಟೆ ಮದುವೆಯಾಗಿದ್ದಳು. ಹಿರಿಯ ಮಗ ಕಾರ್ತಿಕ್ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ. ಸೈಕೋ ತಂದೆ ಮಾಡಿದ ಹೀನ ಕೃತ್ಯಕ್ಕೆ ಮಕ್ಕಳೇ ಬಾಯಿಗೆ ಬಂದ ರೀತಿ ಬೈದು ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟಿದ್ದಾರೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Husband kills wife suspecting affair at Pilar in Ullal, kills himself too. The deceased has been identified as Shoba Poojary (45) and husband Shivanand. Ullal police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am