ಬ್ರೇಕಿಂಗ್ ನ್ಯೂಸ್
27-10-22 02:52 pm Mangalore Correspondent ಕ್ರೈಂ
ಉಳ್ಳಾಲ, ಅ.27 : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ.
ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆಗೈದವರು. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಶೋಭಾ ಅವರು ಮನೆ ಹತ್ತಿರದ ಇನ್ನೂರು ಗುತ್ತು ಕುಟುಂಬಸ್ಥರ ಮನೆಯಿಂದ ಗೊಬ್ಬರ ತಂದಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಇನ್ನೂರು ಗುತ್ತು ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾನೆ. ಪಕ್ಕದ ಮನೆಯ ಶಕುಂತಳ ಶೆಟ್ಟಿ ಅವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಶೋಭಾ ಅವರು ಬೆಡ್ ರೂಮಿನ ಮಂಚದಲ್ಲಿ ಹೆಣವಾಗಿದ್ದರು. ಗಾಬರಿಗೊಂಡ ಶಕುಂತಳಾ ಅವರು ಮನೆಮಂದಿಗೆ ತಿಳಿಸಿದಾಗ ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ.




ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಪತ್ನಿ ಅಲ್ಲದೆ ಮಗಳ ಮೇಲೂ ನಿರಂತರವಾಗಿ ಸಂಶಯ ಪಡುತ್ತಿದ್ದರು ಎನ್ನಲಾಗಿದೆ. ಇದರಿಂದ ಸೈಕೋ ರೀತಿ ವರ್ತಿಸುತ್ತಿದ್ದು ನೆರೆಹೊರೆಯವರಲ್ಲೂ ವಿನಾ ಕಾರಣ ತಗಾದೆ ಎತ್ತಿ ಗಲಾಟೆ ನಡೆಸುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಪತ್ನಿ ಶೋಭಾ ಅವರಿಗೆ ಯಾರಾದರೂ ಫೋನ್ ಕರೆ ಮಾಡಿದರೂ ಸೈಕೋ ಪತಿರಾಯ ಗಲಾಟೆ ನಡೆಸುತ್ತಿದ್ದನೆಂದು ನೆರೆಹೊರೆಯ ನಿವಾಸಿಗಳು ತಿಳಿಸಿದ್ದಾರೆ.




ಶೋಭಾ ಅವರ ಕಿರಿಯ ಮಗಳು ಕಾವ್ಯ ಎರಡು ವರ್ಷದ ಹಿಂದಷ್ಟೆ ಮದುವೆಯಾಗಿದ್ದಳು. ಹಿರಿಯ ಮಗ ಕಾರ್ತಿಕ್ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ. ಸೈಕೋ ತಂದೆ ಮಾಡಿದ ಹೀನ ಕೃತ್ಯಕ್ಕೆ ಮಕ್ಕಳೇ ಬಾಯಿಗೆ ಬಂದ ರೀತಿ ಬೈದು ತಾಯಿ ಮೃತದೇಹದ ಮುಂದೆ ಕಣ್ಣೀರಿಟ್ಟಿದ್ದಾರೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Husband kills wife suspecting affair at Pilar in Ullal, kills himself too. The deceased has been identified as Shoba Poojary (45) and husband Shivanand. Ullal police are now investigating the case.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm