ಬ್ರೇಕಿಂಗ್ ನ್ಯೂಸ್
11-10-20 09:42 pm Mangaluru Correspondent ಕ್ರೈಂ
ವಿಟ್ಲ, ಅಕ್ಟೋಬರ್ 11: ಇಲ್ಲಿನ ಮೇಗಿನಪೇಟೆಯ ಒಂಟಿ ಮಹಿಳೆ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ.
ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (೨೪) ಬಂಧಿತ ಆರೋಪಿ. ಈತ ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯ ರಮ್ಲಾ ಮರದ ಪೀಠೋಪಕರಣ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮನೆ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ ಹಾಗೂ ವಿವಿಧ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಇನ್ನೊಂದು ರೂಪ ಬರುವ ಮೊದಲೇ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ ಕೃತ್ಯದ ಸಮಯ ಬಳಸಿದ ವಸ್ತುಗಳನ್ನು ಹಾಗೂ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಮಿಕನಾಗಿ ವಿಟ್ಲಕ್ಕೆ ಬಂದ ಈತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಹಣದ ಕೊರತೆಯಾಗಿ ಮೂರು ದಿನಗಳಿಂದ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಎಂದು ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾನೆ.
ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟೈನ್ ಡಿಸೋಜ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.
ಇದನ್ನೂ ಓದಿ: ವಿಟ್ಲ ಒಂಟಿ ಮಹಿಳೆ ದರೋಡೆ ; ಕೊರೊನಾ ಲಾಕ್ಡೌನಲ್ಲಿ ಸಿಕ್ಕಿಬಿದ್ದ ಯುವಕನದ್ದೇ ಕೃತ್ಯ !
The Vitla police have succeeded in arresting the accused who assaulted woman, tied up her limbs and robbed her in the early hours of Friday, October 8. The accused has been identified as Jubair Ahmed from Uttar Pradesh.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm