ಬ್ರೇಕಿಂಗ್ ನ್ಯೂಸ್
11-10-20 09:42 pm Mangaluru Correspondent ಕ್ರೈಂ
ವಿಟ್ಲ, ಅಕ್ಟೋಬರ್ 11: ಇಲ್ಲಿನ ಮೇಗಿನಪೇಟೆಯ ಒಂಟಿ ಮಹಿಳೆ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ.
ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (೨೪) ಬಂಧಿತ ಆರೋಪಿ. ಈತ ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯ ರಮ್ಲಾ ಮರದ ಪೀಠೋಪಕರಣ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮನೆ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ ಹಾಗೂ ವಿವಿಧ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಇನ್ನೊಂದು ರೂಪ ಬರುವ ಮೊದಲೇ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ ಕೃತ್ಯದ ಸಮಯ ಬಳಸಿದ ವಸ್ತುಗಳನ್ನು ಹಾಗೂ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಮಿಕನಾಗಿ ವಿಟ್ಲಕ್ಕೆ ಬಂದ ಈತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಹಣದ ಕೊರತೆಯಾಗಿ ಮೂರು ದಿನಗಳಿಂದ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಎಂದು ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾನೆ.
ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟೈನ್ ಡಿಸೋಜ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.
ಇದನ್ನೂ ಓದಿ: ವಿಟ್ಲ ಒಂಟಿ ಮಹಿಳೆ ದರೋಡೆ ; ಕೊರೊನಾ ಲಾಕ್ಡೌನಲ್ಲಿ ಸಿಕ್ಕಿಬಿದ್ದ ಯುವಕನದ್ದೇ ಕೃತ್ಯ !
The Vitla police have succeeded in arresting the accused who assaulted woman, tied up her limbs and robbed her in the early hours of Friday, October 8. The accused has been identified as Jubair Ahmed from Uttar Pradesh.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm