ಬ್ರೇಕಿಂಗ್ ನ್ಯೂಸ್
11-10-20 09:42 pm Mangaluru Correspondent ಕ್ರೈಂ
ವಿಟ್ಲ, ಅಕ್ಟೋಬರ್ 11: ಇಲ್ಲಿನ ಮೇಗಿನಪೇಟೆಯ ಒಂಟಿ ಮಹಿಳೆ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ.
ಉತ್ತರ ಪ್ರದೇಶ ಸಹರನಪುರ ಜಿಲ್ಲೆ ನಿವಾಸಿ ಜುಬೈರ್ ಅಹಮ್ಮದ್ (೨೪) ಬಂಧಿತ ಆರೋಪಿ. ಈತ ಕಳೆದ ಮೂರು ವರ್ಷಗಳಿಂದ ಮೇಗಿನಪೇಟೆಯ ರಮ್ಲಾ ಮರದ ಪೀಠೋಪಕರಣ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆ. ಮೂರು ದಿನಗಳಿಂದ ಮನೆ ಪಕ್ಕದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಬಗ್ಗೆ ಮಹಿಳೆ ನೀಡಿದ ಮಾಹಿತಿ ಹಾಗೂ ವಿವಿಧ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಇನ್ನೊಂದು ರೂಪ ಬರುವ ಮೊದಲೇ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ ಕೃತ್ಯದ ಸಮಯ ಬಳಸಿದ ವಸ್ತುಗಳನ್ನು ಹಾಗೂ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಮಿಕನಾಗಿ ವಿಟ್ಲಕ್ಕೆ ಬಂದ ಈತ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಹಣದ ಕೊರತೆಯಾಗಿ ಮೂರು ದಿನಗಳಿಂದ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಎಂದು ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾನೆ.
ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟೈನ್ ಡಿಸೋಜ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.
ಇದನ್ನೂ ಓದಿ: ವಿಟ್ಲ ಒಂಟಿ ಮಹಿಳೆ ದರೋಡೆ ; ಕೊರೊನಾ ಲಾಕ್ಡೌನಲ್ಲಿ ಸಿಕ್ಕಿಬಿದ್ದ ಯುವಕನದ್ದೇ ಕೃತ್ಯ !
The Vitla police have succeeded in arresting the accused who assaulted woman, tied up her limbs and robbed her in the early hours of Friday, October 8. The accused has been identified as Jubair Ahmed from Uttar Pradesh.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am