ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm