ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 08:38 pm
HK News Desk
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
ಭಾರೀ ಮಳೆ ; ಜುಲೈ 8 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
07-07-26 09:26 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am