ಬ್ರೇಕಿಂಗ್ ನ್ಯೂಸ್
30-10-22 06:02 pm Mangaluru Correspondent ಕ್ರೈಂ
ಸುಳ್ಯ, ಅ.30: ಗಂಡು ಮಗು ಹೆತ್ತವರನ್ನು ನೋಡಿಕೊಳ್ಳಲ್ಲ ಎಂದು ಹತ್ತು ತಿಂಗಳ ನವಜಾತ ಗಂಡು ಶಿಶುವನ್ನು ತಾಯಿಯೇ ಬಾವಿಗೆಸೆದು ಕೊಂದು ಹಾಕಿದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕೂತ್ಕುಂಜ ಎಂಬಲ್ಲಿ ನಡೆದಿದೆ.
ಕೂತ್ಕುಂಜ ನಿವಾಸಿ ಪವಿತ್ರಾ ಎಂಬಾಕೆ ಅ.19ರಂದು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಗರ್ಭಿಣಿಯಾಗಿದ್ದಾಗಲೇ ನನಗೆ ಹೆಣ್ಣು ಮಗು ಆಗುತ್ತದೆ, ಗಂಡು ಮಕ್ಕಳು ತಂದೆ, ತಾಯಿಯನ್ನು ನೋಡಿಕೊಳ್ಳುವುದಿಲ್ಲ. ಹೆಣ್ಣು ಮಗುವೆಂದರೆ ತುಂಬ ಇಷ್ಟ ಎಂದು ಹೇಳಿಕೊಂಡಿದ್ದಳು. ತಾನು ಹೆತ್ತಿದ್ದು ಗಂಡು ಮಗು ಎಂದು ತಿಳಿದು ಅದಕ್ಕೆ ಮೊಲೆ ಹಾಲು ನೀಡದೇ ಸತಾಯಿಸುತ್ತಿದ್ದಳು.
ಅ.29ರಂದು ಸಂಜೆ ಈ ಗಂಡು ಮಗು ತನಗೆ ಇಷ್ಟವಿಲ್ಲದಿದ್ದರೂ ಹುಟ್ಟಿದೆ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಮನೆಯಿಂದ ಹೊರಗೆ ಬಂದು ಅಂಗಳದಲ್ಲಿರುವ ಬಾವಿಗೆ ಎಸೆದಿದ್ದಾಳೆ. ಬಳಿಕ ಮನೆಯ ಒಳಗಡೆ ಓಡಿದ್ದಾಳೆ. ಮನೆಯಲ್ಲಿದ್ದ ಆಕೆಯ ಅಣ್ಣನ ಪತ್ನಿ ರಂಜಿತಾ ಇದನ್ನು ನೋಡಿದ್ದು, ತನ್ನ ಪತಿಗೆ ವಿಷಯ ತಿಳಿಸಿದ್ದಾಳೆ. ಪತಿ ಅರುಣ್ ಕುಮಾರ್ ಮತ್ತು ಆತನ ಸ್ನೇಹಿತರು ಬಂದು ಬಾವಿಯಿಂದ ಮಗುವನ್ನು ಎತ್ತಿ ಬಳಿಕ ಪಂಜ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು, ಅಷ್ಟರಲ್ಲಿ ಮಗು ಮೃತಪಟ್ಟಿತ್ತು.
ಪವಿತ್ರಾ ನಾಲ್ಕು ವರ್ಷದ ಹಿಂದೆ ಬೆಂಗಳೂರು ಮೂಲದ ಹರೀಶ್ ಎಂಬಾತನನ್ನು ಮದುವೆಯಾಗಿದ್ದು ಆನಂತರ ಆತನಿಗೆ ವಿಚ್ಛೇದನ ಕೊಟ್ಟು ತುಮಕೂರು ಮೂಲದ ಮಣಿಕಂಠ ಎಂಬವನನ್ನು ಒಂದು ವರ್ಷದ ಹಿಂದೆ ಮದುವೆಯಾಗಿದ್ದಳು. ಕೆಲ ಕಾಲ ಆತನ ಜೊತೆಗಿದ್ದು ಹುಷಾರಿಲ್ಲವೆಂದು ತವರು ಮನೆಗೆ ಬಂದಿದ್ದಳು. ಈ ವೇಳೆ, ಗರ್ಭಿಣಿಯಾಗಿದ್ದ ಪವಿತ್ರಾ ತನಗೆ ಹೆಣ್ಣು ಮಗುವೇ ಆಗಬೇಕೆಂದು ಹಂಬಲಿಸುತ್ತಿದ್ದಳು. ಇಷ್ಟದಂತೆ ಹೆಣ್ಣು ಮಗುವಾಗದೆ ಗಂಡು ಮಗುವನ್ನು ಹೆತ್ತಿದ್ದರ ಕೋಪದಲ್ಲಿ ಸ್ವತಃ ತಾಯಿಯೇ ತನ್ನ ಹಸುಗೂಸನ್ನು ಬಾವಿಗೆಸೆದು ಕೊಂದಿದ್ದಾಳೆ. ಈ ಬಗ್ಗೆ ಘಟನೆಯನ್ನು ಕಣ್ಣಾರೆ ಕಂಡಿದ್ದ ರಂಜಿತಾ ಸುಬ್ರಹ್ಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಪವಿತ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
Sullia 10 months old baby thrown to the well by mother for giving birth to a boy child in subramanya, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am